ನಮ್ಮದು ಲಾಲಿಪಪ್, ನಿಮ್ಮದು ಬಾಂಬೆ ಮಿಠಾಯಿನಾ? ಕೇಂದ್ರ ಬಜೆಟ್ ಗೆ HDK
Team Udayavani, Feb 1, 2019, 12:33 PM IST
ಬೆಂಗಳೂರು: ನಾವು ರೈತರಿಗಾಗಿ ಘೋಷಿಸಿದ್ದ 48 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾವನ್ನು ಕೇಂದ್ರ ಸರ್ಕಾರ ಲಾಲಿ ಪಪ್ ಅಂತ ಹೇಳಿದ್ದರು. ಈಗ ನಿಮ್ಮ ಹೊಸ ಯೋಜನೆಯಿಂದ ರಾಜ್ಯದ 59 ಲಕ್ಷ ರೈತರಿಗೆ ಬರುವಂತಹ ಹಣ ಕೇವಲ 3528 ಕೋಟಿ. ಈ ಯೋಜನೆಗೆ ಏನಂತ ಹೇಳಬೇಕು..ಬಾಂಬೆ ಮಿಠಾಯಿ ಬಜೆಟ್ ಅಂತ ಕರೆಯಬೇಕಾ..ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾದ ಬಳಿಕ ನೀಡಿದ ಪ್ರತಿಕ್ರಿಯೆ.
ಶುಕ್ರವಾರ ಕೇಂದ್ರ ಬಜೆಟ್ ಮಂಡನೆಯಾದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಒಂದು ಮಾತನ್ನು ಕೇಳಲಿಕ್ಕೆ ಬಯಸುತ್ತೇನೆ, ಈ ಬಜೆಟ್ ಅನ್ನು ಆರ್ಥಿಕ ಇಲಾಖೆ ಅಧಿಕಾರಿಗಳು ತಯಾರು ಮಾಡಿದ್ದೋ ಅಥವಾ ಆರ್ ಎಸ್ ಎಸ್ ನವರೋ ಎಂದು ಎಂದು ಟೀಕಿಸಿದರು.
ಕಳೆದ ಐದು ವರ್ಷದಿಂದ ಜನ ನಿರೀಕ್ಷಿಸುತ್ತಿದ್ದರು. ಆ ನಿಟ್ಟಿನಲ್ಲಿ 5 ಲಕ್ಷದವರೆಗೆ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ. ಆದರೆ ಈ ಬಾರಿಯ ಬಜೆಟ್ ಬಗ್ಗೆ ಜನರು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆ ಹುಸಿಯಾದಂತಾಗಿದೆ ಎಂದರು.
ಕರ್ನಾಟಕಕ್ಕೆ ಸಬ್ ಅರ್ಬನ್ ರೈಲ್ವೆ ಯೋಜನೆಗೂ ಅನುಮತಿ ಕೊಟ್ಟಿಲ್ಲ, ರೈತರ ಸಾಲಮನ್ನಾದ ಬಗ್ಗೆಯೂ ಏನೂ ಹೇಳಿಲ್ಲ. ಕೇಂದ್ರದ ಈ ಬಜೆಟ್ ಸಂಪೂರ್ಣ ವಿಫಲ ಎಂದು ದೂರಿದರು. ಚುನಾವಣಾ ಸಂದರ್ಭದ ಹಿನ್ನೆಲೆಯಲ್ಲಿ ಜನರನ್ನು ಒಲೈಸಲು ಈ ಬಜೆಟ್ ಘೋಷಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್