ರೈತರಿಗೆ ಗೊಬ್ಬರ ಕೊರತೆ ಆದಲ್ಲಿ ಅಧಿಕಾರಿಗಳ ತಲೆ ದಂಡ: ಕೇಂದ್ರ ಸಚಿವ ಖೂಬಾ ಎಚ್ಚರಿಕೆ
ರಾಜಕೀಯ ಮಾಡುವವರಿಗೆ ಹೇಗೆ ಎಳ್ಳು ನೀರು ಬಿಡಬೇಕು ನನಗೆ ಗೊತ್ತಿದೆ
Team Udayavani, Jun 20, 2022, 2:16 PM IST
ಬೀದರ್ :ಬೀದರ್ ಜಿಲ್ಲೆ ಸೇರಿ ರಾಜ್ಯಕ್ಕೆ ಬೇಡಿಕೆಯನುಸಾರ ಕೇಂದ್ರದಿಂದ ರಸಗೊಬ್ಬರ ಪೂರೈಕೆ ಆಗಿದ್ದು, ರೈತರಿಗೆ ಗೊಬ್ಬರ ಕೊರತೆ ಆದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಲೆ ದಂಡ ಎದುರಿಸಬೇಕಾಗುತ್ತದೆ ಮದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಬೇಡಿಕೆಯಂತೆ ರಾಜ್ಯಕ್ಕೆ ಗೊಬ್ಬರ ಪೂರೈಕೆ ಅಗಿದೆ. ಈ ವಿಷಯದಲ್ಲಿ ರಾಜಕೀಯ ಮಾಡುವವರಿಗೆ ಹೇಗೆ ಎಳ್ಳು ನೀರು ಬಿಡಬೇಕು ನನಗೆ ಗೊತ್ತಿದೆ ಎಂದು ಹೇಳಿದರು.
ಸಂಪೂರ್ಣ ಮುಂಗಾರು ಬಿತ್ತನೆ ಆಗುವರೆಗೆ ಜಿಲ್ಲೆಯಲ್ಲಿ ರಸಗೊಬ್ಬರ ಕಡಿಮೆಯಾಗದಂತೆ ಕ್ರಮ ವಹಿಸಲಾಗುತ್ತದೆ. ಬೀದರ್ ಜಿಲ್ಲೆ ಒಳಗೊಂಡಂತೆ ರಾಜ್ಯಕ್ಕೆ ಎಷ್ಟು ರಸಗೊಬ್ಬರ ಬೇಕು ಅದನ್ನು ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಮಳೆ ಹೆಚ್ಚು ಕಡಿಮೆಯಾಗಿ ರಸಗೊಬ್ಬರ ಬೇಡಿಕೆ ಬಂದರೆ ಮೂರು ದಿನದ ಒಳಗಾಗಿ ಇನ್ನೂ ಹೆಚ್ಚು ರಸಗೊಬ್ಬರ ಬೇಕಾದರೂ ಕಳುಹಿಸಿ ಕೊಡುತ್ತೇವೆ. ಕೃಷಿ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿ ರಸಗೊಬ್ಬರ ಮಾರಾಟದ ಕೇಂದ್ರಗಳಿಗೆ ಭೇಟಿ ನೀಡಿ ಗೊಬ್ಬರ ಮಾರಾಟದ ಕುರಿತು ಮಾಹಿತಿ ಪಡೆಯಬೇಕು ಮತ್ತು ಏನಾದರೂ ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳು ಆಯಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅಥವಾ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ