ಕೇಂದ್ರ ಸಚಿವ ಖೂಬಾ ಮತ್ತು ರೈತನ ನಡುವೆ ವಾಗ್ವಾದ: ಆಡಿಯೋ ವೈರಲ್, ಆಕ್ರೋಶ

ರೈತನೇ ಅಲ್ಲ, ಇದು ರಾಜಕೀಯ ಪ್ರೇರಿತ ಎಂದ ಖೂಬಾ

Team Udayavani, Jun 16, 2022, 6:32 PM IST

bhagavanth-kubha

ಬೀದರ್ : ರಸಗೊಬ್ಬರ ವಿಷಯವಾಗಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತವರು ಕ್ಷೇತ್ರದ ರೈತರೊಬ್ಬರಿಗೆ ಉಡಾಫೆಯಾಗಿ ಮಾತನಾಡಿರುವ ಆಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಚಿವರ ವರ್ತನೆಗೆ ರೈತ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಐದಾರು ದಿನಗಳ ಹಿಂದೆ ಔರಾದ್ ತಾಲೂಕಿನ ಹೆಡಗಾಪುರದ ರೈತ ಸಚಿವ ಖೂಬಾ ಅವರ ಮೊಬೈಲ್‌ಗೆ ಕರೆ ಮಾಡಿ ತಮ್ಮ ಗ್ರಾಮದಲ್ಲಿ ಗೊಬ್ಬರ ಕೊರತೆ ಕುರಿತು ಮಾತನಾಡಿದ್ದು, ಬೇಗ ಕಳುಹಿಸುವ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಸಮಾಧಾನಕರ ಉತ್ತರ ನೀಡಬೇಕಿದ್ದ ಸಚಿವರು, ಅದಕ್ಕೆ ನಾನೇನು ಮಾಡಲಿ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಈ ವೇಳೆ ಸಚಿವರ ಮತ್ತು ರೈತ ಮಧ್ಯ ಏಕ ವಚನದಲ್ಲಿ ಮಾತಿನ ವಾಗ್ವಾದ ಆಗಿದ್ದು, ಒಬ್ಬರಿಗೊಬ್ಬರು ಅವಾಜ್ ಹಾಕಿದ್ದ ಸಂಭಾಷಣೆ ಆಡಿಯೋ ಚರ್ಚೆಗೆ ಗ್ರಾಸವಾಗಿದೆ.

ಗೊಬ್ಬರವನ್ನು ಕೇಂದ್ರದಿಂದ ನಾವು ಕರ್ನಾಟಕಕ್ಕೆ ಕಳುಹಿಸುತ್ತೇವೆ. ರೈತನ ಮನೆ-ಮನೆಗೆ ಗೊಬ್ಬರ ಕಳುಹಿಸುವ ಕೆಲಸ ನನ್ನದಲ್ಲ. ಕೆಳಗಿನ ಸಾವಿರಾರು ಜನ ನೌಕರರರಿದ್ದಾರೆ. ಅಲ್ಲಿನ ಶಾಸಕ ಇದಾನಲ್ಲ ಅವನಿಗೆ ಹೋಗಿ ಕೇಳು, ನನಗೆ ಬೇರೆ ಕೆಲಸ ಇಲ್ಲವೇ ಎಂದು ಏಕ ವಚನದಲ್ಲಿ ಮಾತನಾಡಿದ್ದಾರೆ. ನೀವು ನಮ್ಮವರೂ ಎಂದು ಜನ ನಿಮಗೆ ಕೇಳುತ್ತಾರೆ ಎಂದಿದಕ್ಕೆ ಖೂಬಾ, ನನಗ್ ಯ್ಯಾಕ್ ಕೇಳ್ತಾರಾ. ಗೊಬ್ಬರ ರಾಜ್ಯಕ್ಕೆ ಕಳಿಸೋದು ನನ್ನ ಕೆಲಸ, ಕಳಿಸಿದ್ದೇನೆ. ಬರುತ್ತದೆ ಬಿಡಿ ಎಂದಿದ್ದಾರೆ. ಇದರಿಂದ ಕೆರಳಿದ ರೈತ ಸಹ ಸಚಿವರಿಗೆ ಜೋರು ಧ್ವನಿಯಲ್ಲಿ ಮುಂದಿನ ಚುನಾವಣೆಯಲ್ಲಿ ನೋಡ್ಕೊತಿವಿ ಎಂದು ಅವಾಜ್ ಹಾಕಿದ್ದಾರೆ. ಇಂಥ ಚುನಾವಣೆಯನ್ನು ನಾನು ಎಷ್ಟೋ ನೋಡಿರುವೆ ಎಂದು ಖೂಬಾ ಸಹ ಜೋರಾಗಿಯೇ ಮಾತನಾಡಿದ್ದಾರೆ.

ಇದನ್ನೂ ಓದಿ :  ಕಾವೇರಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ರೈತನಲ್ಲ ಎಂದ ಖೂಬಾ

ಕೇಂದ್ರ ಸಚಿವರು ಮತ್ತು ರೈತರ ನಡುವೆ 4 ನಿಮಿಷದ ಆಡಿಯೋ ಸಂಭಾಷಣೆ ಇದಾಗಿದೆ. ಹೆಡಗಾಪುರದ ರೈತ ಎಂದು ಖೂಬಾ ಜತೆ ಮಾತನಾಡಿದ್ದು ಕುಶಾಲ ಪಾಟೀಲ ಎಂದು ಹೇಳಲಾಗುತ್ತಿದ್ದು, ಇವರು ಔರಾದ ತಾಲೂಕಿನ ಜೀರ್ಗಾ(ಕೆ) ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ರಸಗೊಬ್ಬರ ಕುರಿತಾಗಿ ನನ್ನೊಂದಿಗೆ ಮಾತನಾಡಿದ ವ್ಯಕ್ತಿ ರೈತನಲ್ಲ, ಒಬ್ಬ ಸರ್ಕಾರಿ ಶಾಲೆಯ ಸಹ ಶಿಕ್ಷಕ. ರಾತ್ರಿ ವೇಳೆ ಕರೆ ಮಾಡಿದ್ದ ವ್ಯಕ್ತಿ ರಸಗೊಬ್ಬರ ಬಗ್ಗೆ ಕೇಳುತ್ತಾ ಆಕ್ಷೇಪಾರ್ಯ ಪದಗಳು ಬಳಸಿದ್ದು, ನಾನು ಯಾವ ಮಾತುಗಳಿಗೆ ಉತ್ತರಿಸಬೇಕು ಅಷ್ಟಕ್ಕೆ ಮಾತ್ರ ಉತ್ತರಿಸಿದ್ದೇನೆ. ಆದರೆ, ಅವರಿಗೆ ಬೇಕಾದಷ್ಟು ಸಂಭಾಷಣೆಯನ್ನು ಎಡಿಟ್ ಮಾಡಿಕೊಂಡು ಇಂದು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನಮ್ಮ ಸರ್ಕಾರಕ್ಕೆ ಹಾಗೂ ನನ್ನ ಹೆಸರಿಗೆ ಕಪ್ಪು ಚುಕ್ಕೆ ತರುವ ಕೆಲಸ ಮಾಡಲಾಗಿದೆ. ಇದು ರಾಜಕೀಯ ಪ್ರೇರಿತವಾಗಿದ್ದು, ನಾನು ಮತ್ತು ನಮ್ಮ ಸರ್ಕಾರ ಸದಾಕಾಲ ರೈತ ಪರ ಕೆಲಸ ಮಾಡುತ್ತಿದೆ ಎಂದು ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.