ಕೇಂದ್ರ ಸಚಿವ ಸ್ಥಾನ: ಲೋಪ ಹುಡುಕುವುದು ಸಲ್ಲ-ಅಂಗಡಿ
Team Udayavani, Jun 5, 2019, 3:04 AM IST
ಬೆಂಗಳೂರು: ಸಂಸತ್ತಿನಲ್ಲಿ ಒಟ್ಟು 65 ಬ್ರಾಹ್ಮಣ ಸಮುದಾಯದ ಸಂಸದರಿದ್ದಾರೆ. ಆದರೆ ಲಿಂಗಾಯತ ಸಂಸದರ ಸಂಖ್ಯೆ ಕೇವಲ 9. ಹೀಗಿರುವಾಗ ನನ್ನೊಬ್ಬನಿಗೆ ಸಚಿವ ಸ್ಥಾನ ನೀಡಿರುವುದು, ಅದರಲ್ಲೂ ರಾಜ್ಯ ಖಾತೆ ನೀಡಿರುವುದು ಸರಿಯಾಗಿಯೇ ಇದೆ. ಇದರಲ್ಲಿ ಲೋಪ ಹುಡುಕುವುದು ಸರಿಯಲ್ಲ ಎಂದು ಹೇಳುವ ಮೂಲಕ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಪರೋಕ್ಷವಾಗಿ ತಿರುಗೇಟು ನೀಡಿದರು.
ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ಅವರು ಮಂಗಳವಾರ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಸಾಮಾನ್ಯ ಪ್ರಯಾಣಿಕರ ಸಮಸ್ಯೆ ತಿಳಿಯುವ ಸಲುವಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸಿದ್ದೇನೆ. ಸಾಮಾನ್ಯರ ಬೋಗಿಯಲ್ಲಿ ಸ್ವತ್ಛತೆ ಇಲ್ಲದಿರುವುದು ಕಂಡುಬಂತು. ಇನ್ನು ಮುಂದೆ ಸಾಮಾನ್ಯ ಬೋಗಿಗಳಲ್ಲಿ ಕಸ, ಗಲೀಜು ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲ್ವೆ ಯೋಜನೆಗೆ ಸಂಬಂಧಪಟ್ಟಂತೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ಯೋಜನೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಈ ವೇಳೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಸೇರಿ ಇತರೆ ಮುಖಂಡರು ಸಸಿ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಸುರೇಶ್ ಅಂಗಡಿ, ಬಳಿಕ ಜಗನ್ನಾಥ ಜೋಶಿಯವರ ಪುತ್ಥಳಿಗೆ ಗೌರವ ಸಲ್ಲಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ನೂತನ ಸಚಿವರಿಗೆ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಸಂಸದ ಡಾ.ಉಮೇಶ್ ಜಾಧವ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು