ಕೇಂದ್ರ ಸಚಿವ ಸದಾನಂದಗೌಡ ನನಗಿಂತ ಸೀನಿಯರ್ ಅಲ್ಲ- ಯತ್ನಾಳ ತಿರುಗೇಟು
Team Udayavani, Dec 25, 2020, 9:45 PM IST
ವಿಜಯಪುರ: ನಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಮಂತ್ರಿ ಆಗಿದ್ದು, ಸದಾನಂದಗೌಡ ಅವರು ಈಗ ಸಚಿವರಾಗಿದ್ದಾರೆ. ಹೀಗಾಗಿ ಯಾರು ಸೀನೀಯರ್ ಎಂದು ನೀವೇ ನಿರ್ಧರಿಸಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ಸಚಿವ ಸದಾನಂದಗೌಡ ಅವರಿಗೆ ತಿರುಗೇಟು ನೀಡಿದ್ದಾರೆ.
ಸಂಪುಟ ವಿಸ್ತರಣೆ, ಪುನಾರಚನೆ ಕುರಿತ ತಮ್ಮ ಹೇಳಿಕೆ ಸಚಿವ ಸದಾನಂದ ಗೌಡ ಅವರು ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷರಲ್ಲ, ಪಕ್ಷದ ಸಾಮಾನ್ಯ ಶಾಸಕ ಮಾತ್ರ. ಅವರಿಂದ ಏನು ಮಾಡಲು ಸಾಧ್ಯ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕೇಂದ್ರ ಸಚಿವ ಸದಾನಂದಗೌಡರು ಸರಿಯಾಗೇ ಹೇಳಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರೇ ತಾವು ಪ್ರಧಾನಿ ಅಲ್ಲ, ಸಾಮಾನ್ಯ ಜನ ಸೇವಕ ಎಂದಿದ್ದಾರೆ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನೇ. ಸದಾನಂದಗೌಡ ಒಳ್ಳೆಯ ಸಲಹೆ ಕೊಟ್ಟಿದ್ದಾರೆ ಎಂದು ಕುಟುಕಿದ್ದಾರೆ.
ನಾನು ಸಾಮಾನ್ಯ ಶಾಸಕ, ಸೇವಕ. ಹೀಗಾಗಿ ಸದಾನಂದಗೌಡ ಅವರಿಗೆ ಅಭಿನಂದನೆಗಳು. ಇಷ್ಟಕ್ಕೂ ಎಲ್ಲಿಯೂ ನನ್ನನ್ನು ನಾನು ರಾಷ್ಟ್ರೀಯ ನಾಯಕನೆಂದು ಹೇಳಿಕೊಂಡಿಲ್ಲ. ನಾನು ಓರ್ವ ಸಾಮಾನ್ಯ ಶಾಸಕ ಅವರು ಹೇಳಿದ್ದು ನೂರಕ್ಕೆ ನೂರು ಸತ್ಯ ಹಾಗೂ ಸೂಕ್ತವಾಗಿದೆ. ಅವರು ಇಷ್ಟೋಂದು ಜ್ಞಾನ ಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಕೃತಜ್ಞತೆಗಳು. ಹಾದೀಬೀದಿಯಲ್ಲಿ ಪತ್ರಕರ್ತರು ಕೇಳುತ್ತಾರೆ. ಪತ್ರಕರ್ತರು ಎಲ್ಲಿ ಪ್ರಶ್ನೆ ಕೇಳುತ್ತಾರೋ ಅಲ್ಲೇ ಉತ್ತರಿಸಿದ್ದೇನೆ. ನಾನು ಸ್ಚಯಂ ಘೋಷಿತ ರಾಷ್ಟೀಯ, ರಾಜ್ಯ, ಜಿಲ್ಲಾ ನಾಯಕನಲ್ಲ. ಜನರಿಂದ ಜನರಿಗಾಗಿ ಆಯ್ಕೆಯಾಗಿದ್ದೇನೆ. ಸದಾನಂದಗೌಡ ಮುಖ್ಯಮಂತ್ರಿ ಆಗಿದ್ದವರು, ಕೇಂದ್ರ ರೇಲ್ವೇ ಖಾತೆ ಸಚಿವರಾಗಿದ್ದವರು. ಈಗ ರಸಗೊಬ್ಬರ ಸಚಿವರಾಗಿ ಯಶಸ್ವಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಅವರು ನಾನು ಒಂದೇ ಕಾಲದಲ್ಲಿ ಶಾಸಕರಾಗಿ ಆಯ್ಕೆಯಾದವರೇ, ನನಗಿಂತ ಅವರೇನೂ ಹಿರಿಯರಲ್ಲ.ಅವರು ರಾಜ್ಯಾಧ್ಯಕ್ಷರಾಗಿದ್ದ ವೇಳೆಯೇ ನನ್ನನ್ನು ಪಕ್ಷದಿಂದ 6 ವರ್ಷ ಅಮಾನತ್ತು ಮಾಡಿದ್ದರು. ಅವರಿಗೆ ನಮ್ನ ಮೇಲೆ ಪ್ರೀತಿ ಜಾಸ್ತಿ ಇದೆ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ