ಮೇ 3ರ ಬಳಿಕವೇ ವಿ.ವಿ.ಆರಂಭ; ತತ್‌ಕ್ಷಣ ತರಗತಿ ಆರಂಭಿಸಲು ಸರಕಾರ ಉತ್ಸುಕ; ವಿ.ವಿ.ಗಳ ವಿರೋಧ


Team Udayavani, Apr 25, 2020, 7:00 AM IST

ಮೇ 3ರ ಬಳಿಕವೇ ವಿ.ವಿ.ಆರಂಭ; ತತ್‌ಕ್ಷಣ ತರಗತಿ ಆರಂಭಿಸಲು ಸರಕಾರ ಉತ್ಸುಕ; ವಿ.ವಿ.ಗಳ ವಿರೋಧ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ತರಗತಿಗಳನ್ನು ತತ್‌ಕ್ಷಣ ಆರಂಭಿಸಲು ಸರಕಾರ ಉತ್ಸುಕವಾಗಿದೆಯಾದರೂ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಉಪ ಕುಲಪತಿಗಳು ಮೇ 3ರ ವರೆಗೂ ತರಗತಿ ತೆರೆಯದಿರಲು ನಿರ್ಧರಿಸಿದ್ದಾರೆ.

ಲಾಕ್‌ಡೌನ್‌ ಸಂಬಂಧಿಸಿದಂತೆ ರಾಜ್ಯ ದಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ. ಅಲ್ಲದೆ ಹಸಿರು ವಲಯದ ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟವೂ ವ್ಯಾಪಕ ವಾಗಿದೆ. ಈ ಹಿನ್ನೆಲೆಯಲ್ಲಿ ವಿ.ವಿ.ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ನಾತಕೋತ್ತರ ತರಗತಿ ಆರಂಭಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಆದರೆ ಮೇ 3ರ ವರೆಗೂ ಅವಕಾಶ ನೀಡುವುದಿಲ್ಲ ಎಂದು ವಿ.ವಿ.ಗಳ ಉಪಕುಲಪತಿಗಳು ಪರೋಕ್ಷ ವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು “ಉದಯವಾಣಿ’ಗೆ ಖಚಿತಪಡಿಸಿವೆ.

ಉನ್ನತ ಶಿಕ್ಷಣ ಪರಿಷತ್‌ ವತಿಯಿಂದ ಈಗಾಗಲೇ ವಿವಿಧ ವಿ.ವಿ.ಗಳ ಕುಲಪತಿಗಳ ಸಭೆ ಕರೆಯಲಾಗಿದೆ. ವಿ.ವಿ.ಗಳಲ್ಲಿ ಸದ್ಯ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಅಲ್ಲದೆ ಆನ್‌ಲೈನ್‌ ತರಗತಿಗಳನ್ನು ಅಗತ್ಯ ಸುರಕ್ಷಾ ಕ್ರಮ ಅನುಸರಿಸಿಕೊಂಡು ನಡೆಸಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಸಮಿತಿ ರಚನೆ
ತರಗತಿ, ಪರೀಕ್ಷೆ ಮತ್ತು ಮೌಲ್ಯ ಮಾಪನಕ್ಕೆ ಸಂಬಂಧಿಸಿ ಸಮಿತಿ ರಚಿಸಲಾಗಿದೆ. ಸೋಮವಾರದೊಳಗೆ ವರದಿ ಒಪ್ಪಿಸಲು ನಿರ್ದೇಶನ ನೀಡಲಾಗಿದೆ. ಈ ಸಂಬಂಧ ರಾಜ್ಯದ ಹಲವು ವಿ.ವಿ .ಗಳ ಉಪಕುಲ ಪತಿ, ಕುಲಸಚಿವರಿಗೆ ಉನ್ನತ ಶಿಕ್ಷಣ ಪರಿಷತ್‌ನಿಂದ ಸೂಚನೆ ಹೋಗಿದೆ ಎಂದು ಮೂಲ ಗಳು ಖಚಿತ ಪಡಿಸಿವೆ.

ತರಗತಿ ನಡೆಸುವುದು ಕಷ್ಟ?
ತರಗತಿ ಆರಂಭಿಸಿದರೆ ಹಾಸ್ಟೆಲ್‌ ತೆರೆಯಬೇಕಾಗುತ್ತದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಸಂಚಾರ ವ್ಯವಸ್ಥೆ ಸಮಸ್ಯೆಯಾಗಲಿದೆ. ಹೀಗಾಗಿ ಕನಿಷ್ಠ ಮೇ 3ರ ವರೆಗೆ ತರಗತಿ ಆರಂಭಿಸುವುದು ಕಷ್ಟ ಎಂಬ ವಿಷಯವನ್ನು ಸರಕಾರದ ಗಮನಕ್ಕೆ ತರಲಾಗಿದೆ ಎಂದು ಉಪಕುಲ ಪತಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜೂನ್‌ 2ನೇ
ವಾರದಲ್ಲಿ ಪರೀಕ್ಷೆ?
ಲಾಕ್‌ಡೌನ್‌ ಅವಧಿಯಲ್ಲಿ ಬಹುತೇಕ ಎಂಜಿನಿಯರಿಂಗ್‌ ಕಾಲೇಜುಗಳು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುತ್ತಿವೆ. ಹೀಗಾಗಿ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಜೂ.2ನೇ ವಾರ ಮತ್ತು 2, 4 ಮತ್ತು 6ನೇ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ ಕೊನೆಯ ವಾರ ಅಥವಾ ಆಗಸ್ಟ್‌ ಮೊದಲ ವಾರವಷ್ಟೇ ನಡೆಯಬಹುದು ಎನ್ನಲಾಗುತ್ತಿದೆ. ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ನಡೆಸುವ ಪರೀಕ್ಷೆ ಆಧಾರದಲ್ಲಿ ಇಂಟರ್ನಲ್‌ ಅಸೆಸೆ¾ಂಟ್‌ ಅಂಕ ನೀಡುವ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ ಗಂಭೀರ ಚಿಂತನೆ ನಡೆಸಿದೆ.

ಆನ್‌ಲೈನ್‌ ತರಗತಿ,ಪರೀಕ್ಷೆ ನಡೆಸಬಹುದು.ಬೆಂಗಳೂರು ವಿ.ವಿ. ಪರಿಣಾಮಕಾರಿಯಾಗಿ ಆನ್‌ಲೈನ್‌ ತರಗತಿ ನಡೆಸುತ್ತಿದೆ.
-ಪ್ರೊ| ಕೆ.ಆರ್‌. ವೇಣುಗೋಪಾಲ್‌,
ಬೆಂ. ವಿ.ವಿ. ಉಪಕುಲಪತಿ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.