ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
Team Udayavani, Aug 12, 2021, 9:00 AM IST
ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ಸುಟ್ಟು ಹಾಕಿದ ಘಟನೆ ಬುಧವರಾ ತಡರಾತ್ರಿ ನಡೆದಿದೆ.
ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ಗಳನ್ನ ತಂದು ಬೆಂಕಿ ಹಚ್ಚಿರುವುದು ಕಂಡು ಬಂದಿದೆ.
ಇದನ್ನೂ ಓದಿ:ಕೌಟುಂಬಿಕ ಕಲಹ: ಶೂಟ್ ಮಾಡಿ ತಂದೆಯಿಂದಲೇ ಮಗನ ಹತ್ಯೆ
ಘಟನೆಯ ಬಗ್ಗೆ ಮಾಹಿತಿ ನೀಡಿದ ಶಾಸಕ ಸತೀಶ್ ರೆಡ್ಡಿ, ‘1:23ಕ್ಕೆ ದುಷ್ಕರ್ಮಿಗಳು ಬಂದಿದ್ದು, ಆ ಕಡೆ ಈ ಕಡೆ ನೋಡಿ ಎರಡು ಗಾಡಿಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಾರೆ. 1:30ಕ್ಕೆ ನಮಗೆ ಘಟನೆ ಬಗ್ಗೆ ಗೊತ್ತಾಗಿದೆ. ಬ್ಯಾಟರಿ ಸ್ಫೋಟಗೊಂಡಿದ್ದರಿಂದ ಶಬ್ದ ಬಂದು ನಮಗೆ ಎಚ್ಚರವಾಯಿತು. ಗೇಟ್ ಬಳಿ ಇದ್ದ ಪೊಲೀಸರು ಹಾಗೂ ನಮ್ಮ ವಾಚ್ಮ್ಯಾನ್ ಓಡಿ ಬಂದರು. ಅರ್ಧಗಂಟೆ ಕಾಲ ಬೆಂಕಿಯನ್ನ ಆರಿಸುವ ಕೆಲಸ ನಡೆಯಿತು’ ಎಂದಿದ್ದಾರೆ.
ದುಷ್ಕರ್ಮಿಗಳು ಶಾಸಕರ ಮನೆಯ ಹಿಂಬದಿಯ ಗೇಟಿಂದ ಒಳಗೆ ನುಗ್ಗಿದ್ದಾರೆಂದು ಆಗ್ನೇಯ ವಿಭಾಗ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಸ್ಪಷ್ಟನೆ ನೀಡಿದ್ದಾರೆ. ವಿಶೇಷ ತಂಡಗಳ ಮೂಲಕ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ