ಸಾವಿನ ಸುದ್ದಿ ತಿಳಿಸದ ಅಧಿಕಾರಿ ಅಮಾನತು
Team Udayavani, Sep 9, 2019, 3:00 AM IST
ಗಂಗಾವತಿ: ಮಗಳು ಸತ್ತ ಸುದ್ದಿಯನ್ನು ಮುಚ್ಚಿಟ್ಟು ಕಂಡಕ್ಟರ್ನ್ನು ಡ್ಯೂಟಿಗೆ ಕಳುಹಿಸಿದ್ದ ಈಶಾನ್ಯ ಸಾರಿಗೆ ಸಂಸ್ಥೆಯ ಗಂಗಾವತಿ ಘಟಕದ ಸಹಾಯಕ ಸಂಚಾರಿ ನಿರೀ ಕ್ಷಕಿ ಹೇಮಾವತಿ ಅವರನ್ನು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಫಯಾಜ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಬುಧವಾರ ಸ್ಥಳೀಯ ಈಶಾನ್ಯ ಸಾರಿಗೆ ಸಂಸ್ಥೆಯ ಕಂಡಕ್ಟರ್ ಮಂಜುನಾಥ ಅವರ ಮಗಳು ಕವಿತಾ (11) ಬಾಗಲಕೋಟೆ ಜಿಲ್ಲೆಯ ರಾಂಪೂರ ಗ್ರಾಮದಲ್ಲಿ ಟೈಫಾಯಿಡ್ನಿಂದ ಮೃತರಾಗಿದ್ದರು.
ಈ ವಿಷಯವನ್ನು ತಂದೆಗೆ ತಿಳಿಸುವಂತೆ ಮನೆಯವರು ದೂರವಾಣಿ ಮೂಲಕ ಮನವಿ ಮಾಡಿದರೂ ಹೇಮಾವತಿ ಅವರು ನಿರ್ಲಕ್ಷ್ಯ ಮಾಡಿ ಮಂಜುನಾಥ ಅವರನ್ನು ಗಂಗಾವತಿ-ಕೊಲ್ಹಾಪೂರ ಡ್ನೂಟಿಗೆ ಕಳುಹಿಸಿದ್ದರು. ಪ್ರಕರಣದ ತೀವ್ರತೆ ಅರಿತು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಹಮದ್ ಫಯಾಜ್ ಅವರು ಸಂಸ್ಥೆಯ ಡಿಟಿಒ ಹಾಗೂ ಡಿಎಂಇ ಅವರನ್ನು ಗಂಗಾವತಿ ಡಿಪೋಗೆ ಕಳುಹಿಸಿ ಸಮಗ್ರ ವರದಿ ಪಡೆದು ಶನಿವಾರ ಸಂಜೆ ಎಟಿಐ ಹೇಮಾವತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಶಾನ್ಯ ಸಾರಿಗೆ ಸಂಸ್ಥೆಯ ನೌಕರರು ಎಐಸಿಟಿಯು ಹಾಗೂ ಸಿಐಟಿಯು ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು. ಸಾರಿಗೆ ಬಸ್ಗಳಲ್ಲಿ ಮೊಬೈಲ್ ನಿಷೇಧ ಮಾಡಿರುವ ಕಾರಣ ದುರ್ಘಟನೆ ಜರುಗಿದೆ. ಕೂಡಲೇ ಆದೇಶ ವಾಪಸ್ ಪಡೆಯುವಂತೆ ಪ್ರತಿಭಟನೆ ವೇಳೆ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ