ಹಂಪಿ ಉತ್ಸವದ ಲಾಂಛನ ಅನಾವರಣ
Team Udayavani, Jan 1, 2020, 3:04 AM IST
ಬಳ್ಳಾರಿ: ಜ.10, 11ರಂದು ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಜಿಲ್ಲಾ ಧಿಕಾರಿಗಳ ಸಭಾಂಗಣದಲ್ಲಿ ಸಂಸದ ವೈ. ದೇವೆಂದ್ರಪ್ಪ ಹಾಗೂ ಶಾಸಕರಾದ ಕರುಣಾಕರ ರೆಡ್ಡಿ, ಕೆ.ಸಿ.ಕೊಂಡಯ್ಯ ಮತ್ತು ಅಲ್ಲಂವೀರಭದ್ರಪ್ಪ ಅವರು ಬಿಡುಗಡೆ ಮಾಡಿದರು.
ಕಾರವಾರದ ಕಲಾವಿದ ದಾಮೋಧರ್ ರಚಿಸಿರುವ ಕಲ್ಲಿನ ರಥ ಮತ್ತು ವಿಜಯನಗರ ಅರಸರ ಲಾಂಛನ, ಕಾಮನಬಿಲ್ಲಿನ ಏಳು ಬಣ್ಣಗಳಿಂದ ಕೂಡಿರುವ ಉತ್ಸವದ ಲಾಂಛನ ಬಿಡುಗಡೆ ಮಾಡಿದ ನಂತರ ಮಾತನಾಡಿದ ಶಾಸಕ ಜಿ.ಕರುಣಾಕರ ರೆಡ್ಡಿ, ಮೈಸೂರು ದಸರಾದಂತೆ ಹಂಪಿ ಉತ್ಸವವು ವಿಜೃಂಭಣೆಯಿಂದ ಜರುಗಬೇಕು.
ಉತ್ಸವಕ್ಕೆ ಬರುವ ಪ್ರವಾಸಿಗರಿಗೆ ಬೆಂಗಳೂರಿನಿಂದ ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿ ಸಿದಂತೆ ಖಾಸಗಿ ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚಿಸಬೇಕು. ಉತ್ಸವದಲ್ಲಿ ಬಂದೋಬಸ್ತ್ಗೆ ಮಹಿಳಾ ಮತ್ತು ಗಸ್ತು ಪೊಲೀಸರನ್ನು ಹೆಚ್ಚಿನದಾಗಿ ನೇಮಿಸುವಂತೆ ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿ, ಉತ್ಸವವು ನಾಡಹಬ್ಬದ ರೀತಿಯಲ್ಲಿ ಆಚರಣೆಯಾಗಲಿ. ಹಂಪಿ ವಿಶ್ವವಿದ್ಯಾಲಯವನ್ನು ಈ ಉತ್ಸವದಲ್ಲಿ ತೊಡಗಿಸಿಕೊಳ್ಳಿ ಎಂದರು. ಸಂಸದ ವೈ. ದೇವೇಂದ್ರಪ್ಪ ಮಾತನಾಡಿ, ಉತ್ಸವಕ್ಕೆ ಬೇಕಾದ ಅಗತ್ಯ ಅನುದಾನವನ್ನು ಸರ್ಕಾರದಿಂದ ಕೊಡಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ