ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ
Team Udayavani, Oct 1, 2020, 8:41 PM IST
ಬೆಂಗಳೂರು: ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯ ತೀವ್ರ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ ನಡೆಸಲಾಗಿದೆ ಎಂದು ಕಿಡಿಕಾರಿದ್ದಾರೆ.
ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತರದ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ ಎಂದರೆ, ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿದ್ದಾರೆ ಎಂಬುದರಲ್ಲಿ ನನಗೆ ಉತ್ಪ್ರೇಕ್ಷೆ ಕಾಣುತ್ತಿಲ್ಲ.
ಯಾವುದೇ ಸರಕಾರ ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಕೈ ಹಾಕುತ್ತಾರೆ ಎಂದರೆ, ಉತ್ತರ ಪ್ರದೇಶ ಪೊಲೀಸರ ಹಿಂದೆ ಅಲ್ಲಿ ಅಧಿಕಾರ ಹಿಡಿದವರ “ನಿರ್ದೇಶನ” ಇಲ್ಲದಿರಲು ಸಾಧ್ಯವೇ? ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!