UPA-NDA ಅನುದಾನ:ಶ್ವೇತಪತ್ರ ಹೊರಡಿಸಲು ಪರಂ ಆಗ್ರಹ
Team Udayavani, Feb 5, 2024, 9:59 PM IST
ಬೆಂಗಳೂರು: ಯುಪಿಎ ಮತ್ತು ಎನ್ಡಿಎ ಸರ್ಕಾರಗಳ ಅವಧಿಯಲ್ಲಿ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ. ರಾಜ್ಯದಲ್ಲಿ ನಾವೂ (ಕಾಂಗ್ರೆಸ್ ಸರ್ಕಾರ) ಶ್ವೇತಪತ್ರ ಹೊರಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸವಾಲು ಹಾಕಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ ಸಮತೋಲನ ಕಾಯ್ದುಕೊಂಡಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ರೂ. ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.