ನಾ ಜನನಾಯಕನೂ ಅಲ್ಲ, ಸೇವಕನೂ ಅಲ್ಲ: ಉಪ್ಪಿ ಸುದ್ದಿಗೋಷ್ಠಿ ಹೈಲೈಟ್ಸ್


Team Udayavani, Aug 12, 2017, 12:38 PM IST

upendra-main.jpg

ಬೆಂಗಳೂರು: ಜಾತಿ, ಧರ್ಮ, ದುಡ್ಡು, ಫೇಮಸ್ ಇರುವವರಿಗೆ ವೋಟ್ ಹಾಕಲಾಗುತ್ತಿದೆ. ವೋಟ್ ಬ್ಯಾಂಕ್ ರಾಜಕೀಯ ನಮಗೆ ಬೇಕಾಗಿಲ್ಲ. ಜನರ ಜತೆ ಕೆಲಸ ಮಾಡಬೇಕಾದ ಅನಿರ್ವಾಯತೆ ಇದೆ. ಟೆಕ್ನಾಲಜಿ ಇದೆ, ಖಂಡಿತ ನಾವು ಜನರನ್ನು ತಲುಪಬಹುದು. ಸೋಲು, ಗೆಲುವು ಮುಖ್ಯವಲ್ಲ. ಬನ್ನಿ ಎಲ್ಲರೂ ಸೇರಿ ಹೊಸ ಇತಿಹಾಸ ನಿರ್ಮಿಸೋಣ…ಇದು ನಟ, ನಿರ್ದೇಶಕ ಉಪೇಂದ್ರ ಅವರ ನುಡಿ.

ರಾಜಕೀಯ ಪ್ರವೇಶ ಹಿನ್ನೆಲೆಯಲ್ಲಿ ಶನಿವಾರ ಬಿಡದಿಯ ರುಪ್ಪೀಸ್ ರೆಸಾರ್ಟ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮಗೆ ಪ್ರಜಾಕೀಯ, ಪ್ರಜಾಕಾರಣ, ಪ್ರಜಾಪ್ರಭುತ್ವ ಬೇಕಾಗಿದೆ.ಈಗ ಸಮಾವೇಶಗಳನ್ನು ಯಾಕ್ ನಡೆಸುತ್ತಾರೋ ಗೊತ್ತಿಲ್ಲ. ಒಂದು ಕಾಲದಲ್ಲಿ ಇಷ್ಟೊಂದು ಟಿವಿ ಚಾನೆಲ್ ಇರಲಿಲ್ಲ.  ಅಂದು ರಾಲಿ ಮಾಡಿ ಭಾಷಣ ಮಾಡುವ ಪರಿಸ್ಥಿತಿ ಇತ್ತು. ಆದ್ರೆ ಈಗ ರಾಲಿ ಮಾಡಿ ಅದನ್ನೇ ಟಿವಿಯಲ್ಲಿ ನೋಡ್ಬೇಕಾ? ಜಾತಿ, ದುಡ್ಡು, ಹಣ, ಧರ್ಮ ನೋಡಿ ಮತ ಹಾಕ್ಬೇಕಾ?

ರಾಜಕೀಯ ಪಕ್ಷ ಕಟ್ಟಲು ಹಣ ಬೇಕೇ, ಬೇಕು ಎನ್ನುವ ಪರಿಸ್ಥಿತಿ ಇದೆ. ರಾಜಕಾರಣಿಯಾಗಬೇಕಾದರೆ ಮೊದಲು ಅರ್ಹತೆ ಮುಖ್ಯವಾಗಬೇಕಾಗುತ್ತದೆ. ದುಡ್ಡು, ಜಾತಿ ಬಲ ಇಲ್ಲದೆ ಗೆಲ್ಲಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಾನು ಕೆಲಸಗಾರ ಅದಕ್ಕಾಗಿ ಖಾಕಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ. ನನ್ನ ಪಕ್ಷಕ್ಕೆ ಬರುವವರು, ಸ್ವ ವಿವರ ಕಳುಹಿಸಿ (ಇ ಮೇಲ್ ಐಡಿ: [email protected], [email protected][email protected]ನಿಮ್ಮೊಂದಿಗೆ ಚರ್ಚಿಸಿಯೇ ನಾನು ಮುಂದುವರಿಯುತ್ತೇನೆ.

ನಮ್ಮ ದೇಶದಲ್ಲಿ ಇರುವುದು ಪ್ರಜಾಪ್ರಭುತ್ವ ಹಾಗಾಗಿ ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ರಾಜ. ಎಲ್ಲರೂ ಪ್ರತಿವರ್ಷ ಜನರು ಸರ್ಕಾರಕ್ಕೆ ತೆರಿಗೆ ಸಲ್ಲಿಸುತ್ತಾರೆ. ನಮ್ಮ ಬಜೆಟ್ ಆಗೋದೆ ಅದ್ರಿಂದ. . ಜನ ಕೊಡ್ತಿರೋ ತೆರಿಗೆ ಸಮರ್ಪಕವಾಗಿ ಖರ್ಚಾಗಬೇಕು.  ನನ್ನ ಪ್ರಕಾರ ಜನರು ಶ್ರೀಸಾಮಾನ್ಯರಲ್ಲ, ನನ್ನ ಪ್ರಕಾರ ಅಸಾಮಾನ್ಯರು ಎಂದು ವಿಶ್ಲೇಷಿಸಿದರು.

ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದೇನೆ. ಆದರೆ ಹೊಸ ಪಕ್ಷದ ಹೆಸರೇನು? ಅದರ ಚಿಹ್ನೆ ಏನು ಎಂಬುದು ಈಗಲೇ ಹೇಳಲು ಸಾಧ್ಯವಿಲ್ಲ. ಚುನಾವಣಾ ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅಲ್ಲಿಂದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಜನರ ದುಡ್ಡು ಎಲ್ಲೂ ಪೋಲಾಗದೆ ಖರ್ಚಾಗಬೇಕು.  ಅವರಿಗೆ ಕೆಲಸ ಮಾಡುವ ತಾಕತ್ತಿದ್ಯಾ ಅಂತ ನೋಡಿ ಮತ ನೀಡಬೇಕು. ನಮ್ಮ ಮನೆಯಲ್ಲಿ ಕೆಲಸ ಮಾಡುವವರ ಜಾತಿ ನೋಡ್ತೇವಾ? ಅದಕ್ಕಾಗಿ ಸಮರ್ಥರು ಮಾತ್ರ ಶಾಸಕರು, ಸಂಸದರು ಆಗಿ ಆಯ್ಕೆಯಾಗಬೇಕು ಎಂದರು.

ಭ್ರಷ್ಟಾಚಾರವೂ ಬೇಡ, ಹಣವೂ ಬೇಡ:

ಭ್ರಷ್ಟಾಚಾರವೂ ಬೇಡ, ಹಣವೂ ಬೇಡ. ಹಣದಿಂದಲೇ ಭ್ರಷ್ಟಾಚಾರವಾಗುತ್ತೆ. ನಾನು ಕೂಡಾ ಪುಕ್ಸಟ್ಟೆಯಾಗಿ ಮಾಡುತ್ತಿಲ್ಲ, ಸಂಬಳ ಪಡೆದು ಕೆಲಸ ಮಾಡುವ ಕಾರ್ಮಿಕನಾಗುತ್ತೇನೆ. ಆದರೆ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ಬೇಡ. ಯಾಕೆಂದರೆ ನಾನೊಂದು ಆಶಾ ಭಾವನೆ ಹೊಂದಿದ್ದೇನೆ. ಹಣ ಸಂಗ್ರಹಿಸಿ ಪಕ್ಷ ಕಟ್ಟಿದ್ರೆ ಏನಾಗುತ್ತೆ, ನಾಳೆ ನಾವು ಜನರಿಗೆ ಹಣ ಖರ್ಚು ಮಾಡಬೇಕಾಗುತ್ತದೆ. ಹಾಗಾಗಿ ಜಾತಿ, ಧರ್ಮ, ಹಣ ಇಲ್ಲದೇ ಮುನ್ನುಗ್ಗಲು ಪ್ರಯತ್ನಿಸುತ್ತಿದ್ದೇನೆ. ಖಂಡಿತ ನೀವೆಲ್ಲರೂ ಕೈಜೋಡಿಸಿದರೆ ಸಾಧ್ಯ ಎಂಬುದು ನನ್ನ ವಿಶ್ವಾಸ. ನನ್ನಲ್ಲಿ ಹಿಂದಿನಿಂದಲೂ ಇಂಥದ್ದೊಂದು ಕಲ್ಪನೆ ಇತ್ತು.

ಸುದ್ದಿಗೋಷ್ಠಿಯ  ಹೈಲೈಟ್ಸ್

*ಸ್ವ ಇಚ್ಛೆಯಿಂದ ಪ್ರಜಾಕೀಯ ಪಕ್ಷ ಕಟ್ಟುತ್ತಿದ್ದೇನೆ

*ಇ ಮೇಲ್ ಐಡಿಗಳಿಗೆ ನಿಮ್ಮ ಸಲಹೆಗಳನ್ನು ನನಗೆ ಕಳುಹಿಸಿಕೊಡಿ

*ರಾಜಕಾರಣಿಯಾಗಬೇಕಾದರೆ ಮೊದಲು ಅರ್ಹತೆ ಮುಖ್ಯ

*ನಮ್ಮ ದೇಶದಲ್ಲಿ ಇರುವುದು ಪ್ರಜಾಪ್ರಭುತ್ವ

*ಇಂದು ದುಡ್ಡು, ತೋಳ್ಬಲದಿಂದ ರಾಜಕೀಯ ಮಾಡುತ್ತಿದ್ದಾರೆ

*ಕೆಳಮಟ್ಟದಿಂದ ಬದಲಾವಣೆ ತರಬೇಕಾಗಿದೆ

*ಸ್ವಚ್ಛ ಭಾರತದಂತೆ ಸ್ವಚ್ಛ ಆಡಳಿತ ನನ್ನ ಉದ್ದೇಶ

*ನಾನು ನಾಯಕನೂ ಅಲ್ಲ, ಸೇವಕನೂ ಅಲ್ಲ, ನಾನು ಕಾರ್ಮಿಕ

*

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.