ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ಪರಿಹಾರಕ್ಕೆ ಏಕರೂಪ ದರ
Team Udayavani, Feb 16, 2023, 8:30 PM IST
ವಿಧಾನಪರಿಷತ್ತು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳ ಪರಿಹಾರಕ್ಕೆ ಏಕರೂಪ ದರ ನಿಗದಿಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಎ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರ ಪರವಾಗಿ ಉತ್ತರಿಸಿದ ಮಾಧುಸ್ವಾಮಿ, ಯೋಜನೆಯಡಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಏಕರೂಪ ದರ ನಿಗದಿಪಡಿಸಬೇಕು ಎಂಬ ಬೇಡಿಕೆ ಹಿನ್ನೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳಿಗೆ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 5 ಲಕ್ಷ 4 ಪಟ್ಟು ಸೇರಿ 20 ಲಕ್ಷ. ನೀರಾವರಿ ಹಾಗೂ ಬಾಗಾಯತ್ ಜಮೀನಿಗೆ ಪ್ರತಿ ಎಕರೆಗೆ 6 ಲಕ್ಷದಂತೆ 4 ಪಟ್ಟು ಸೇರಿಸಿ 24 ಲಕ್ಷ ರೂ.ಗಳಂತೆ ಏಕರೂಪ ದರ ನಿಗದಿಪಡಿಸಿ ಒಪ್ಪಂದದ ಐತೀರ್ಪು ರಚಿಸಲು ಆದೇಶ ಹೊರಡಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಯುಕೆಪಿ-3 ಯೋಜನೆಯಡಿ 20 ಗ್ರಾಮಗಳು ಮುಳುಗಡೆ ಆಗುತ್ತಿದ್ದು, ಈ ಪೈಕಿ 8 ಗ್ರಾಮಗಳಿಗೆ 9 ಪುನರ್ವಸತಿ ಕೇಂದ್ರಗಳನ್ನು ಗುರುತಿಸಿ ಲೇಔಟ್ ನಕ್ಷೆ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ 12 ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮೂರನೇ ಹಂತಕ್ಕೆ 1.33 ಲಕ್ಷ ಎಕರೆ ಭೂಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಈ ಪೈಕಿ ಇದುವರೆಗೆ 26,173 ಎಕರೆ ಭೂಸ್ವಾಧೀನಕ್ಕೆ ಐತೀರ್ಪು ಮಾಡಲಾಗಿದೆ. 44,928 ಎಕರೆ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿ. 12,373 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.
ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ 51,148.94 ಕೋಟಿ ರೂ. ಆಗಿದ್ದು, ಈ ಪೈಕಿ ಭೂಸ್ವಾಧೀನಕ್ಕೆ 17,627 ಕೋಟಿ ರೂ. ಮೊತ್ತವನ್ನು ಮೀಸಲಿಡಲಾಗಿದೆ. ಇಲ್ಲಿವರೆಗೆ ಭೂಸ್ವಾಧೀನಕ್ಕೆ 2,598.91 ಕೋಟಿ ಹಾಗೂ ಮುಳುಗಡೆ ಹೊಂದುವ 20 ಗ್ರಾಮಗಳ ಮತ್ತು ಬಾಗಲಕೋಟೆ ಪಟ್ಟಣದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕೆ 1,209 ಕೋಟಿ ಸೇರಿ ಒಟ್ಟಾರೆ 3,808.21 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ನ್ಯಾಯಾಧೀಕರಣದಿಂದ ಅಂತಿಮ ಅಧಿಸೂಚನೆ ಆಗುವ ತನಕ ಇಂತಿಷ್ಟೇ ದಿನಗಳಲ್ಲಿ ಯೋಜನೆ ಆಗಲಿದೆ ಎಂದು ನಿರ್ದಿಷ್ಟವಾಗಿ ಹೇಳಲು ಆಗುವುದಿಲ್ಲ. ಹಂತ-ಹಂತವಾಗಿ ಸರ್ಕಾರ ಮುಂದುವರಿಯಬೇಕಾಗುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಅಂತಿಮ ಅಧಿಸೂಚನೆ ಸಂಬಂಧ ಕಾನೂನು ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ಇದೇ ವೇಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ