ಉಪ್ಪುಂದ: ಚಾಕಲೇಟ್ ಗಂಟಲಲ್ಲಿ ಸಿಲುಕಿ 2ನೇ ತರಗತಿ ವಿದ್ಯಾರ್ಥಿನಿ ಸಾವು
Team Udayavani, Jul 20, 2022, 2:47 PM IST
ಉಪ್ಪುಂದ: ಕವರ್ ಸಹಿತ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ.
ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಹೌರಾದಲ್ಲಿ ಕಂಟ್ರಿ ಲಿಕ್ಕರ್ ಕುಡಿದು 6 ಮಂದಿ ಸಾವು ; ಹಲವರು ಅಸ್ವಸ್ಥ
ಘಟನೆ ವಿವರ: ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್ ಸಹಿತ ಚಾಕಲೇಟ್ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ