ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
Team Udayavani, Jun 8, 2023, 4:45 PM IST
ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.
ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಇದನ್ನೂ ಓದಿ:500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ
ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು