ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು
Team Udayavani, Oct 20, 2021, 11:00 PM IST
ಬೆಂಗಳೂರು: ಉತ್ತರಾಖಂಡದಲ್ಲಿ ಉಂಟಾಗಿರುವ ನೆರೆ ಹಾಗೂ ಭೂಕುಸಿತದಲ್ಲಿ ರಾಜ್ಯದ 96 ಮಂದಿ ಸಿಲುಕಿದ್ದು, 92 ಮಂದಿ ಸುರಕ್ಷಿತವಾಗಿದ್ದಾರೆ, ನಾಲ್ವರು ನೆಟ್ವರ್ಕ್ ಸಮಸ್ಯೆಯಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಸಂಜೆ 6 ಗಂಟೆವರೆಗೆ ಸಹಾಯವಾಣಿಗೆ ಹತ್ತು ಕರೆಗಳು ಬಂದಿದ್ದು, 96 ಮಂದಿ ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದಾರೆ. ಈ ಪೈಕಿ 92 ಮಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನುಳಿದ ನಾಲ್ವರ ಪೈಕಿ ಮೂವರು ನೆಟ್ವರ್ಕ್ ಸಮಸ್ಯೆಯಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಒಬ್ಬರು ಉತ್ತರಾಖಂಡ ಸರ್ಕಾರ ನೇಮಿಸಿರುವ ಸುರûಾ ಸೇನಾ ಬಲ(ಎಸ್ಎಸ್ಬಿ)ದ ಸ್ಥಳದಲ್ಲಿದ್ದಾರೆ. ಆದರೆ, ಬುಧವಾರ ಬೆಳಗ್ಗೆಯಿಂದ ಅವರು ಕೂಡ ಸಂಪರ್ಕಕ್ಕೆ ಸಿಕಿಲ್ಲ. ಹೀಗಾಗಿ ಅಲ್ಲಿನ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಲ್ಲಿಯೂ ವಿದ್ಯುತ್, ನೆಟ್ವರ್ಕ್ ಸಮಸ್ಯೆ ಇದೆ ಎಂದು ಮಾಹಿತಿ ನೀಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ನೆರೆ ಸಂಕಷ್ಟದಲ್ಲಿರುವವರು?
ಬಸವೇಶ್ವರನಗರದ ಶರತ್ ಚಂದ, ಕುಮಾರ್, ಚಂದ್ರಶೇಖರ್, ಶ್ರೀನಿವಾಸ, ಭಾಸ್ಕರ್, ಆರ್.ಟಿ.ನಗರದಿಂದ ಅನಿತಾ ಟ್ರಾವೆಲ್ಸ್ನಿಂದ ಸುಮಾರು 50 ಮಂದಿ ಉತ್ತರಾಖಂಡದ ಹರಿದ್ವಾರ, ಕೇದಾರನಾಥ ಪ್ರವಾಸಕ್ಕೆ ತೆರಳಿದ್ದಾರೆ. ಯಲಹಂಕದ ರಿತೇಶ್ ಬೆಲ್ ಎಂಬವರು ಗಂಗಾ ಘಾಟ್, ಡೆಹರಾಡೋನ್ನಲ್ಲಿ ಭಾರತೀಯ ಸೇನೆಯಲ್ಲಿರುವ ಉಡುಪಿ ಮೂಲದ ಮೊಹಮ್ಮದ್, ಅವರ ಪತ್ನಿ ಶೋಭಾ, ಪುತ್ರ ಅಖೀಲ್ ಮತ್ತು ವಿಜಯುಪುರದ ಸಿಂದಗಿ ತಾಲೂಕಿನ ಅನಿತಾ ಪಂಪ್ಪಣ್ಣನವರ್ಹಾಗೂ ಅವರ ನಾಲ್ವರು ಕುಟುಂಬ ಸದಸ್ಯರು ನೆರೆಯಲ್ಲಿ ಸಿಲುಕಿದ್ದಾರೆ ಎಂದು ಅವರ ಸಂಬಂಧಿಕರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸಂತ್ರಸ್ತರು ಹಾಗೂ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಹಾಯವಾಣಿ
ರಾಜ್ಯದ ನೆರೆ ಸಂತ್ರಸ್ತರ ನೆರವಿಗಾಗಿ 24×7 ಸಹಾಯವಾಣಿ ತೆರೆದಿದ್ದು, ತುರ್ತು ಸಂದರ್ಭದಲ್ಲಿ 080-22340676 ಅಥವಾ ಟೋಲ್ಫ್ರೀ 080-1070ಗೆ ಕರೆ ಮಾಡಬಹುದು. ಕೂಡಲೇ ಉತ್ತರಖಂಡದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ ರಕ್ಷಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ