ವಿದೇಶಕ್ಕೆ ಹೋಗುವ ಕನ್ನಡಿಗರಿಗೆ ವ್ಯಾಕ್ಸಿನ್ ವ್ಯವಸ್ಥೆ : ಎಲ್ಲವೂ ಅಚ್ಚುಕಟ್ಟು, ನಿರಾತಂಕ


Team Udayavani, Jun 2, 2021, 9:11 PM IST

bvcnxscbvcnxa

ಬೆಂಗಳೂರು : ವ್ಯಾಕ್ಸಿನ್ ಗಾಗಿ ಇಲ್ಲಿ ತಳ್ಳಾಟವಿಲ್ಲ, ನುಗ್ಗಾಟವಿಲ್ಲ. ದೈಹಿಕ ಅಂತರವಿಲ್ಲ ಎಂಬ ಆತಂಕವಿಲ್ಲ. ಮಾಸ್ಕ್ ಧರಿಸದವರು ಬರುತ್ತಾರೆಂಬ ಭಯವೂ ಇಲ್ಲ. ಮಿಗಿಲಾಗಿ ಲಸಿಕೆ ಖಾಲಿಯಾಗಿಬಿಡುತ್ತದೆ ಎನ್ನುವ ಅನುಮಾನವೂ ಇಲ್ಲ. ಇಷ್ಟಕ್ಕೂ ಇಷ್ಟು ವ್ಯವಸ್ಥಿತವಾಗಿ ವ್ಯಾಕ್ಸಿನೇಷನ್ ನಡೆಯುತ್ತಿರುವ ಜಾಗವಾದರೂ ಎಲ್ಲಿ ಎನ್ನುತ್ತೀರಾ? ಸ್ಥಳ: ಬೆಂಗಳೂರು ನಗರ ವಿಶ್ವವಿದ್ಯಾಲಯದ, ಸೆಂಟ್ರಲ್ ಕಾಲೇಜು ಆವರಣ.

ಇಲ್ಲಿ ವಿದೇಶಗಳಲ್ಲಿ ವ್ಯಾಸಂಗ ಹಾಗೂ ಉದ್ಯೋಗ ಮಾಡುತ್ತಿರುವ ಬೆಂಗಳೂರಿಗರಿಗಾಗಿ ಮಂಗಳವಾರದಿಂದ  ವಿಶೇಷ ಲಸಿಕೆ ಅಭಿಯಾನವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಲ್ಲಿ ಎಲ್ಲವೂ ವ್ಯವಸ್ಥಿತ:

ಸಾಮಾನ್ಯವಾಗಿ ಲಸಿಕೆ ಕೇಂದ್ರಗಳ ಮುಂದೆ ತಾಸುಗಟ್ಟಲೆ ಕ್ಯೂ ನಿಲ್ಲುವ ಅಗತ್ಯ ಇಲ್ಲಿಲ್ಲ. ಜತೆಗೆ, ಬಿಸಿಲಿನಲ್ಲಿ ನಿಂತು ಬಸವಳಿಯುವ ಪ್ರಮೇಯವೂ ಇಲ್ಲ. ಅಚ್ಚುಕಟ್ಟಾಗಿ ಸಾಲುಸಾಲು ಕುರ್ಚಿಗಳನ್ನು ಹಾಕಲಾಗಿದೆ. ಅದೃಷ್ಟಕ್ಕೆ ಮೈ ತುಂಬಾ ಹಸಿರು ಹೊದ್ದುಕೊಂಡ ಮರಗಳಿವೆ. ತಂಪಾದ ನೆರಳಿದೆ. ಲಸಿಕಾಂಕ್ಷಿಗಳಿಗೆ ಕೂರಲು ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರು ತಾಳ್ಮೆಯಿಂದ ಸರದಿ ಸಾಲಿನಲ್ಲಿ ಬಂದು ಲಸಿಕೆ ಹಾಕಿಸಿಕೊಂಡು ಮನೆಗಳಿಗೆ ತರಳುತ್ತಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿನ ಜನರಿಗೆ ಮಾತ್ರ ಲಸಿಕೆ ಕೊಡಲಾಗುತ್ತಿದೆ. ವಿದೇಶಕ್ಕೆ ತೆರಳುವವರನ್ನು ಆದ್ಯತಾ ಗುಂಪಿಗೆ ಸೇರಿಸಲಾಗಿದೆ. ಇವೆಲ್ಲರೂ ಅತ್ಯಂತ ಶಿಸ್ತುಬದ್ಧರಾಗಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸುತ್ತಾ ಲಸಿಕೆ ಪಡೆಯುತ್ತಿದ್ದಾರೆ.

“ಯಾವ ಸಣ್ಣ ಸಮಸ್ಯೆಯೂ ಇಲ್ಲದೆ ಇಲ್ಲಿ ಲಸಿಕೀಕರಣ ನಡೆಯುತ್ತಿದ್ದು, ವಿವಿ ಮತ್ತು ಪಾಲಿಕೆ ಸಿಬ್ಬಂದಿಯ ಚೆನ್ನಾಗಿ ವ್ಯವಸ್ಥೆ ಮಾಡಿದ್ದಾರೆ. ನಮಗೆ ಆದಷ್ಟು ಬೇಗ ಲಸಿಕೆ ಕೊಡಿ ಎಂದು ವಿವಿಧ ದೇಶಗಳಲ್ಲಿ ಕೆಲಸ ಮಾಡುತ್ತಿರುವವರು, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಬೇಡಿಕೆ ಇಡುತ್ತಿದ್ದರು. ಅವರ ಮನವಿಗೆ ಪುರಸ್ಕಾರ ಕೊಟ್ಟು ಈ ಶಿಬಿರವನ್ನು ನಡೆಸಲಾಗುತ್ತಿದೆ. ಮಂಗಳವಾರ 275 ಜನ ಲಸಿಕೆ ಪಡೆದಿದ್ದರು. ಇವತ್ತು ಕೂಡ 200ಕ್ಕೂ ಹೆಚ್ಚು ಜನರು ಪಡೆದಿದ್ದಾರೆ” ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಇವರಿಗೆ ಕೋವಿಶೀಲ್ಡ್:

ಲಸಿಕೆ ಪಡೆಯದೇ ಇವರು ವಿದೇಶಕ್ಕೆ ಹೋಗಲು ಆಗುವುದಿಲ್ಲ. ಹೀಗಾಗಿ ಇವರೆಲ್ಲರಿಗೂ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ಕೊಡಲಾಗುತ್ತಿದೆ. ಆರು ವಾರಗಳ ಅಂತರದಲ್ಲಿ ಇವರಿಗೆ ಎರಡನೇ ಡೋಸ್ ನೀಡಿ, ವ್ಯಾಕ್ಸಿನ್ ಪಡೆದ ಬಗ್ಗೆ ಅಧಿಕೃತ ʼಸರ್ಟಿಫಿಕೇಟ್ʼ ನೀಡಲಾಗುವುದು. ಎಲ್ಲರಿಗೂ ವಿಶ್ವ ಆರೋಗ್ಯ ಸಂಸ್ಥೆ (WHO) ಮಾನ್ಯತೆ ನೀಡಿರುವ ʼಕೋವಿಶೀಲ್ಡ್ʼ ಲಸಿಕೆ ಕೊಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.