ಇಂದಿನಿಂದ ಎರಡನೇ ಹಂತದ ಏರ್ ಲಿಫ್ಟ್: ಕರ್ನಾಟಕಕ್ಕೆ ಬರಲಿದೆ 17 ವಿಮಾನಗಳು
Team Udayavani, May 17, 2020, 9:31 AM IST
ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ವಿವಿಧ ದೇಶದಗಳಲ್ಲಿ ಸಿಲುಕಿರುವ ಭಾರತೀಯರನ್ನು ಐತಿಹಾಸಿಕ ಏರ್ ಲಿಫ್ಟ್ ಮೂಲಕ ಭಾರತಕ್ಕೆ ಕರೆದುಕೊಂಡು ಬರಲಾಗುತ್ತಿದೆ. ಮೊದಲ ಹಂತದ ವಂದೇ ಭಾರತ್ ಮಿಷನ್ ಯೋಜನೆ ಮೇ 13ಕ್ಕೆ ಅಂತ್ಯವಾಗಿದ್ದು, ಇಂದಿನಿಂದ ಎರಡನೇ ಹಂತದ ಏರ್ ಲಿಫ್ಟ್ ಆರಂಭವಾಗಲಿದೆ.
ಇಂದಿನಿಂದ ಮೇ 22ರ ವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಏರ್ ಲಿಫ್ಟ್ ನಡೆಯಲಿದೆ. ಈ ಹಂತದಲ್ಲಿ 31 ದೇಶಗಳಿಂದ ಭಾರತೀಯರನ್ನು ಕರೆದುಕೊಂಡು ಬರಲಾಗುತ್ತಿದೆ. 149 ವಿಮಾನಗಳು ದೇಶದ 15 ನಗರಗಳಿಗೆ ಆಗಮಿಸಲಿದೆ.
ಮೊದಲ ಹಂತದಂತೆ ಈ ಬಾರಿಯೂ ಗರ್ಭಿಣಿಯರು, ವೃದ್ಧರು, ಆರೋಗ್ಯ ಸಮಸ್ಯೆ ಇರುವವರು, ಕೆಲಸ ಕಳೆದುಕೊಂಡವರಿಗೆ ಆದ್ಯತೆ ನೀಡಲಾಗಿದೆ. ಮತ್ತು ಇಲ್ಲಿ ಬಂದು ಕಡ್ಡಾಯ ಕ್ವಾರಂಟೈನ್ ಗೆ ಒಳಗಾಗಬೇಕಿದೆ.
ಈ ಪೈಕಿ ಕರ್ನಾಟಕಕ್ಕೆ ಒಟ್ಟು 14 ದೇಶಗಳಿಂದ 17 ವಿಮಾನಗಳು ಬರಲಿದೆ. ಸೋಮವಾರ ಒಂದು ವಿಮಾನ ಮಂಗಳೂರಿಗೆ ಬರಲಿದೆ. ಅಮೆರಿಕಾದಿಂದ 3, ಕೆನಡಾದಿಂದ 2, ಯುಎಇ, ಸೌದಿ ಅರೆಬಿಯಾ, ಮಲೇಷಿಯಾ, ಒಮನ್, ಫಿಲಿಪೈನ್ಸ್, ಫ್ರಾನ್ಸ್, ಜರ್ಮನಿ, ಕತಾರ್, ಇಂಡೋನೇಷ್ಯಾ, ಐರ್ಲೆಂಡ್, ಜಪಾನ್ ಮತ್ತು ಆಸ್ಟ್ರೇಲಿಯಾದಿಂದ ತಲಾ ಒಂದೊಂದು ವಿಮಾನಗಳ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ