ವೀರಶೈವ-ಲಿಂಗಾಯತ ಒಂದೇ :ಬಿಎಸ್ವೈ ಸ್ಪಷ್ಟ ನಿಲುವು
Team Udayavani, Jan 3, 2018, 1:19 PM IST
ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಯುತ್ತಿರುವ ವೇಳೆ ಹುಟ್ಟಿಕೊಂಡಿರುವ ಲಿಂಗಾಯತ-ವೀರಶೈವ ಕುರಿತಾಗಿನ ಗೊಂದಲಗಳ ಬಗ್ಗೆ ಬುಧವಾರ ಸುದ್ದಿಗಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ‘ವೀರಶೈವ-ಲಿಂಗಾಯತ ಎರಡೂ ಒಂದೇ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
‘ಲಿಂಗಾಯತ -ವೀರಶೈವ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಅವರು ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದು, ಇದನ್ನು ಅನೇಕ ಬಾರಿ ಸ್ಪಷ್ಟ ಮಾಡಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ,ಎಂದರು.
‘ನಡೆದಾಡುವ ದೇವರು ಶಿವಕುಮಾರ ಶ್ರೀಗಳು ಈಗಾಗಲೇ ಎರಡೂ ಒಂದೇ ಎನ್ನುವುದನ್ನು ಸ್ಪಷ್ಟ ಮಾಡಿದ್ದಾರೆ.ಇದರಲ್ಲಿ ಯಾವುದೇ ಗೊಂದಲವಿಲ್ಲ’ ಎಂದರು.
‘ಬಸವರಾಜ ಹೊರಟ್ಟಿ ಅವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿದ್ದಾರೆ’ ಎಂದು ಕಿಡಿ ಕಾರಿದರು.