ಸಿಎಂ ಬೆಂಬಲಿಸಿ ಆಣೆ ಮಾಡಿದ ವೀರಶೈವ ಮಹಾಸಭಾ ಅಧ್ಯಕ್ಷ!
Team Udayavani, Apr 10, 2018, 2:39 PM IST
ಮೈಸೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕೇಂದ್ರ ಕ್ಕೆ ಶಿಫಾರಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವೀರಶೈವ ಮುಖಂಡರು ಆಕ್ರೋಶ ಹೊರ ಹಾಕುತ್ತಿರುವಾಗಲೇ ಮೈಸೂರು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹಿನಕಲ್ ಬಸವರಾಜ್ ಬಹಿರಂಗ ಬೆಂಬಲ ಸೂಚಿಸಿ ಆಣೆಯನ್ನೂ ಮಾಡಿದ್ದಾರೆ. ಈ ವಿಡಿಯೋ ಬಹಿರಂಗಗೊಂಡಿದ್ದು, ಇದರ ವಿರುದ್ಧ ಸಂಘಟದ ಪದಾಧಿಕಾರಿಗಳು ಸಭೆ ನಡೆಸಿ ತೀವ್ರ ವಿರೋಧವನ್ನೂ ತೋರಿದ್ದಾರೆ.
ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದಲ್ಲಿ ನಡೆದಿದೆ ಎನ್ನಲಾದ ಸಭೆಯಲ್ಲಿ ಹಿನಕಲ್ ಬಸವರಾಜ್ ಅವರು ಸಿಎಂ ಎದುರು ನಿಂತು ವೀರಾವೇಶದಿಂದಮಾತನಾಡಿ ವೀರಶೈವರೆಲ್ಲಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನೇ ಬೆಂಬಲಿಸುವುದಾಗಿ ಆಣೆಯನ್ನೂ ಮಾಡಿದ್ದಾರೆ.
ಹಿನಕಲ್ ಘೋಷಣೆ ಮಾಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕೈಕಟ್ಟಿ ಮೌನವಾಗಿ ಕುಳಿತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಈ ಹಿಂದೆ ಹಿನಕಲ್ ಬಸವರಾಜ್ ಸಿಎಂ ಸಿದ್ದರಾಮಯ್ಯ ಧರ್ಮ ಒಡೆದಿದ್ದಾರೆ ಎಂದು ಕಿಡಿಯನ್ನೂ ಕಾರಿದ್ದರು.
ಈ ಬಗ್ಗೆ ಮಂಗಳವಾರ ಸಭೆ ಸೇರಿರುವ ವೀರಶೈವ ಮಹಾಸಭಾ ದ ಸದಸ್ಯರು ಹಿನಕಲ್ ಬಸವರಾಜ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಿನಕಲ್ ಬಸವರಾಜ್ ಸೇರಿದಂತೆ ಮೂವರು ಪದಾಧಿಕಾರಿಗಳನ್ನು ಸಂಘಟನೆಯಿಂದ ವಜಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ