ಮುಗಿಯದ ವೀರಶೈವ- ಲಿಂಗಾಯತರ ಗೊಂದಲ: ನಾಳೆ ಮತ್ತೂಂದು ಸಭೆ
Team Udayavani, Oct 11, 2017, 10:11 AM IST
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಒಗ್ಗೂಡಿ ಸುವ ಕುರಿತಂತೆ ನಡೆದ 3ನೇ ಸಭೆಯೂ ಅಪೂರ್ಣಗೊಂಡಿದ್ದು, ಅ. 12 ರಂದು ಮತ್ತೂಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಮಂಗಳವಾರ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ನಡೆದ ಸಭೆ ಅನೌಪಚಾರಿಕ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಎರಡೂ ಬಣಗಳ ಕಾನೂನು ಪಂಡಿತರು ತಮ್ಮ ವಾದ ಮಂಡಿಸಲು ಎಲ್ಲ ದಾಖಲೆಗಳನ್ನು ತೆಗೆದು ಕೊಂಡು ಬಂದಿದ್ದರೂ, ವಿವರವಾಗಿ ಚರ್ಚಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅನೌಪಚಾರಿಕ ಚರ್ಚೆ ನಡೆಸಿ, ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಸಭೆ ನಂತರ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇಂದಿನ ಸಭೆ ಅತ್ಯಂತ ಸೌಹಾರ್ದ ಯುತವಾಗಿ ನಡೆದಿದೆ. ಅ.12 ರ ಅಂತಿಮ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಗಾರರು ಈಗಾಗಲೇ ಸಾಕಷ್ಟು ಮುಂದೆ ಹೋಗಿದ್ದು, ಪತ್ರಿಕೆಗಳಲ್ಲಿ ಎರಡೂ ಸಮುದಾಯ ಭಿನ್ನ ಎನ್ನುವಂತೆ ಜಾಹೀರಾತು ನೀಡಿದ್ದರಿಂದ ಅವರೊಂದಿಗೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಆದರೆ, ಲಿಂಗಾಯತ ಹೋರಾಟ ಸಮಿತಿ ಸದಸ್ಯರೇ ಹೊಂದಾಣಿಕೆಯ ಬಗ್ಗೆ ಆಸಕ್ತಿ ವಹಿಸುತ್ತಿರುವುದರಿಂದ ಮತ್ತೂಂದು
ಸುತ್ತಿನ ಮಾತುಕತೆಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ