ಹಿರಿಯ ಸಾಹಿತಿ ಕೆ.ಬಿ.ಸಿದ್ಧಯ್ಯ ನಿಧನ
Team Udayavani, Oct 19, 2019, 3:00 AM IST
ತುಮಕೂರು: ಜಿಲ್ಲೆಯ ಹಿರಿಯ ಸಾಹಿತಿ, ದಲಿತ ಪರ ಹೋರಾಟಗಾರ, ಜನಪರ ಸಾಮಾಜಿಕ ಚಿಂತಕ ಕೆ.ಬಿ.ಸಿದ್ಧಯ್ಯ (64) ಅವರು ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿ ದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೆಂಕೆರೆ ಯಲ್ಲಿ 1954ರಲ್ಲಿ ಬೈಲಪ್ಪ, ಅಂತೂರಮ್ಮ ದಂಪತಿಗೆ ಜನಿಸಿದ್ದ ಕೆ.ಬಿ.ಸಿದ್ದಯ್ಯ, ಮೈಸೂರು ವಿವಿಯಲ್ಲಿ ಇಂಗ್ಲಿಷ್ ಎಂಎ ಪದವಿ ಪಡೆದಿದ್ದರು.
ತುಮಕೂರಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಒಂದು ತಿಂಗಳ ಹಿಂದೆ ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಕಾರು ಅಪಘಾತವಾಗಿ ಗಾಯಗಳಾಗಿ ದ್ದರಿಂದ ಅಸ್ವಸ್ಥರಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸೇರಿದ್ದರು. ಶುಕ್ರವಾರ ಬೆಳಗಿನ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಪುತ್ರರನ್ನು ಅವರು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!