ಮೈ ಮರೆತರೆ ಅಪಾಯ ತಪ್ಪಿದ್ದಲ್ಲ: ವೆಂಕಯ್ಯ ನಾಯ್ಡು
Team Udayavani, Aug 25, 2021, 6:15 AM IST
ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ನಾವು ಸಾಧಿಸಬೇಕಾದದ್ದು ಇನ್ನೂ ಇದೆ. ಸ್ವಲ್ಪ ಮೈ ಮರೆತರೂ ಅಪಾಯ ತಪ್ಪಿದ್ದಲ್ಲ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ರಾಜಭವನದಲ್ಲಿ ಗಿವ್ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೊರೊನಾಗೆ ಲಸಿಕೆಯೇ ರಾಮಬಾಣ. ಇದಕ್ಕೆ ಪರ್ಯಾಯ ಬೇರೊಂದಿಲ್ಲ. ಹೀಗಾಗಿ, ಪ್ರತಿಯೊಬ್ಬರಿಗೂ ಲಸಿಕೆಯೇ ನಮ್ಮ ಗುರಿಯಾಗ ಬೇಕು ಎಂದು ತಿಳಿಸಿದರು.
ಕೊರೊನಾ ಸಂದರ್ಭ ಭಾರತೀಯ ಸಾಂಪ್ರದಾಯಿಕ ಆಹಾರ ಪದ್ಧತಿ ಅತಿ ಶ್ರೇಷ್ಠ. ಜಂಕ್ ಫುಡ್ ಬಿಟ್ಟು ನಮ್ಮ ಆಹಾರಕ್ಕೆ ಹೆಚ್ಚು ಆದ್ಯತೆ ನೀಡೋಣ. ನಮ್ಮ ಕುಟುಂಬ ಮತ್ತು ಪರಿವಾರದ ಆರೋಗ್ಯ ಕಾಪಾಡಿಕೊಳ್ಳೋಣ ಎಂದು ನಾಯ್ಡು ಅವರು ಕಿವಿಮಾತು ಹೇಳಿದರು.
ಕರ್ನಾಟಕಕ್ಕೆ ಶೇ. 20ರಷ್ಟು ಹೆಚ್ಚುವರಿ ಲಸಿಕೆ ಪೂರೈಕೆ :
ಕರ್ನಾಟಕಕ್ಕೆ ಶೇ. 20ರಷ್ಟು ಹೆಚ್ಚುವರಿ ಲಸಿಕೆ ಪೂರೈಕೆಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಒಪ್ಪಿದ್ದಾರೆ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಮನವಿ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರು ಕೇಂದ್ರ ಸಚಿವರ ಜತೆ ಮಾತನಾಡಿದ್ದು ತತ್ಕ್ಷಣವೇ ಅವರು ಒಪ್ಪಿದ್ದಾರೆ ಎಂದು ಹೇಳಲಾಗಿದೆ.
ನಿತ್ಯ 5 ಲಕ್ಷ ಲಸಿಕೆ ಗುರಿ :
ರಾಜ್ಯದಲ್ಲಿ ಸೆಪ್ಟಂಬರ್ ತಿಂಗಳಿನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪ್ರಸ್ತುತ 3.5ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದ್ದು ಅದನ್ನು 5 ಲಕ್ಷಕ್ಕೆ ಏರಿಸಲಾಗುವುದು. ಕೇಂದ್ರ ಸರಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ಭರವಸೆ ಸಿಕ್ಕಿದೆ. ಜತೆಗೆ, ಕೊರೊನಾ ಮೂರನೇ ಅಲೆ ಅಕ್ಟೋಬರ್ ತಿಂಗಳಲ್ಲಿ ಎದುರಾಗುವ ನಿರೀಕ್ಷೆ ಇರುವುದರಿಂದ ರಾಜ್ಯವು ಮೂಲಸೌಕರ್ಯ ಸೇರಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ