ಜೂನ್18 ರಿಂದ ವಿದ್ಯುತ್ ಅದಾಲತ್ ಆರಂಭ : ಮತ್ತೊಂದು ಜನಪರ ಯೋಜನೆ

ಮೂರನೇ ಶನಿವಾರ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ನಡೆಸುವ ವಿದ್ಯುತ್ ಅದಾಲತ್

Team Udayavani, Jun 14, 2022, 5:32 PM IST

sunil-kkl

ಬೆಂಗಳೂರು : ಗ್ರಾಮೀಣ ವಿದ್ಯುತ್ ಸಮಸ್ಯೆಗಳ ತಕ್ಷಣ ಪರಿಹಾರಕ್ಕೆ ಇಂಧನ ಇಲಾಖೆ ಮುಂದಾಗಿದ್ದು, ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ನಡೆಸುವ ವಿದ್ಯುತ್ ಅದಾಲತ್ ಗೆ ಜೂನ್ 18 ರಿಂದ ಚಾಲನೆ ಸಿಗಲಿದೆ.

ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಲ್ಪಿಸುವುದಕ್ಕಾಗಿ ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಗಳಲ್ಲಿ ಇದು ಒಂದಾಗಿದೆ. ಆಯಾ ತಾಲೂಕು ವ್ಯಾಪ್ತಿಯ ಕಾರ್ಯಪಾಲಕ ಎಂಜಿನಿಯರ್ ಗಳು ಹಾಗೂ ಅಧಿಕಾರಿಗಳು ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ರಾಜ್ಯಾದ್ಯಂತ ನಡೆಯುವ ಈ ಅದಾಲತ್ ಗೆ ಎಲ್ಲ ಎಸ್ಕಾಂ ವ್ಯಾಪ್ತಿಯ ಸುಮಾರು 600 ಸ್ಥಳಗಳಲ್ಲಿ ಅದಾಲತ್ ಆಯೋಜಿಸಲಾಗುತ್ತದೆ. ಅಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಜನಸ್ನೇಹಿ ಅಭಿಯಾನ
ಸರಕಾರಿ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಬೇಕು ಹಾಗೂ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂಬ ಉದ್ದೇಶದಿಂದ ಎಲ್ಲ ಇಲಾಖೆಗಳಲ್ಲೂ ಜನಸ್ನೇಹಿ ಕಾರ್ಯಕ್ರಮಗಳ ಜಾರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಇಂಧನ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದೆ. ಕಳೆದ ತಿಂಗಳು ನಡೆಸಿದ ಟ್ರಾನ್ಸಫಾರ್ಮ್ ದುರಸ್ತಿ ಅಭಿಯಾನದಲ್ಲಿ ಎರಡು ಲಕ್ಷಕ್ಕೂ ಮೇಲ್ಪಟ್ಟು ಟಿಸಿ ನಿರ್ವಹಣೆ ಮಾಡಲಾಗಿದೆ. ಈಗ ವಿದ್ಯುತ್ ಅದಾಲತ್ ಮೂಲಕ ಗ್ರಾಮೀಣ ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಜೂನ್ 5 ರಂದೇ ಆದೇಶ
ಈ ಬಗ್ಗೆ ಜೂನ್ 5 ರಂದೇ ಇಂಧನ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ಪ್ರತಿ ತಿಂಗಳ 3ನೇ ಶನಿವಾರ  ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಸಹಾಯಕ ಕಾರ್ಯಪಾಲಕ ಇಂಜಿನಿಯರ್​ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ಸೂಚಿಸಿದ್ದಾರೆ.

ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ  emg 1 [email protected] ಇ-ಮೇಲ್​ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.