ಇಂದು ವಿಜಯ್ ದಿವಸ್: ಯೋಧರ ತ್ಯಾಗ, ಬಲಿದಾನ ಸ್ಮರಿಸಿದ ಗಣ್ಯರು
Team Udayavani, Jul 26, 2022, 1:38 PM IST
ಬೆಂಗಳೂರು: ನೆರೆ ರಾಷ್ಟ್ರ ಪಾಕಿಸ್ಥಾನ ವಿರುದ್ಧ ಜಮ್ಮು ಕಾಶ್ಮೀರ ಕಾರ್ಗಿಲ್ ನಲ್ಲಿ ನಡೆದ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವನ್ನು (ಜು.26) ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯದ್ದದ ಜಯದ ದಿನ ಹಿನ್ನೆಲೆಯಲ್ಲಿ ರಾಜ್ಯದ ಗಣ್ಯರು ಯೋಧರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದ್ದಾರೆ.
ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಸಮರದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ನಮನಗಳನ್ನು ಸಲ್ಲಿಸುತ್ತಾ, ನಮ್ಮ ಸೇನಾಪಡೆಗಳಿಗೆ ಅಭಿನಂದನೆಗಳನ್ನು ಸಲ್ಲಿಸೋಣ. ಜೈ ಹಿಂದ್ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.
ಇಂದು ನಾವೆಲ್ಲ ನೆಮ್ಮದಿಯಾಗಿ ಜೀವನವನ್ನು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಸೈನಿಕರ ತ್ಯಾಗ, ಬಲಿದಾನ, ಕಠಿಣ ಪರಿಶ್ರಮವೇ ಪ್ರಮುಖ ಕಾರಣ. ಶತ್ರುಗಳನ್ನು ಸದೆಬಡೆದು ಭಾರತ ಮಾತೆಯನ್ನು ಪ್ರತಿಕ್ಷಣವೂ ಉಳಿಸುವ ನಮ್ಮ ಯೋಧರ ಉದಾತ ಸೇವೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಕಾರ್ಗಿಲ್ ವೀರರನ್ನು ನೆನೆದು ವಂದಿಸುತ್ತಿದ್ದೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಇಂದು ಕಾರ್ಗಿಲ್ ವಿಜಯ ದಿನ. ಗಡಿಯೊಳಕ್ಕೆ ನುಸುಳಿ ನಮ್ಮ ಭೂಮಿಯನ್ನು ಆಕ್ರಮಿಸಿದ ಶತ್ರುಗಳನ್ನು ಸೆದೆಬಡಿದು ಮಾತೃಭೂಮಿಯನ್ನು ರಕ್ಷಿಸಿದ ವೀರಯೋಧರಿಗೆ ನನ್ನ ಶತ ನಮನಗಳು. ಅಪ್ರತಿಮ ಕೆಚ್ಚಿನಿಂದ ಹೋರಾಡಿದ ನಮ್ಮ ಸೇನಾಪಡೆಗಳ ಕರ್ತವ್ಯನಿಷ್ಠೆ, ಶೌರ್ಯ, ಪರಾಕ್ರಮಗಳಿಗೆ ಜೈಹೋ.. ಹುತಾತ್ಮರಾದ ವೀರಪುತ್ರರಿಗೆ ಭಾವಪೂರ್ವಕ ಶ್ರದ್ಧಾಂಜಲಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ