Vijayapura: ಸಾತ್ವಿಕ ನನಗೆ ಒಂದೇ ಕರುಳಕುಡಿ, ಉಳಿಸಿಕೊಡಿ: ತಾಯಿ ಪೂಜಾ

ಕಾಲಿಗೆ ಕಟ್ಟಿದ್ದ ಬೆಳ್ಳಿ ಗೆಜ್ಜೆಯಿಂದ ಕೊಳವೆ ಬಾವಿಗೆ ಬಿದ್ದ ಸಾತ್ವಿಕ ಪತ್ತೆ: ತಂದೆ ಸತೀಶ

Team Udayavani, Apr 4, 2024, 7:51 AM IST

3-vijayapura

ವಿಜಯಪುರ : ಸಂಜೆಯಾಗುತ್ತಿದ್ದ ಕಾರಣ ಆಗಷ್ಟೇ ಸಾತ್ವಿಕಗೆ ಊಟ ಮಾಡಿಸಿದ್ದೆ. ಏಕಾಏಕಿ ಮಗು ಕಾಣೆಯಾಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ನನಗಿರುವುದು ಅವನೊಬ್ಬನೇ ಮಗ, ದಯವಿಟ್ಟು ನನ್ನ ಕರುಳ ಕುಡಿ ಉಳಿಸಿಕೊಡಿ ಎಂದು ಸಾತ್ವಿಕನ ತಾಯಿ ಅಂಗಲಾಚುತ್ತಿದ್ದಾರೆ.

ಕೊಳವೆ ಬಾವಿಯಲ್ಲಿ ಬಿದ್ದಿರುವ ತಮ್ಮ ಮಗ ಸುರಕ್ಷಿತವಾಗಿ ಮರಳಲಿ ಎಂದು ಗೋಗರೆಯುತ್ತಿರುವ ಸಾತ್ವಿಕನ ತಾಯಿ ಪೂಜಾ ಮುಜಗೊಂಡ, ನನಗಿರುವುದು ಒಬ್ಬನೇ ಮಗ. ಸಾವಿನ ದವಡೆಯಿಂದ ಪಾರಾಗಿ ಬರಲಿ. ಕಾರ್ಯಾಚರಣೆ ನಡೆಸಿರುವ ತಂಡ ನನ್ನ ಮಗನನ್ನು ಸುರಕ್ಷಿತವಾಗಿ ಹೊರತೆಗೆದು ನನ್ನ ಮಡಿಲಿಗೆ ಹಾಕಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಈ ಮಧ್ಯೆ ಬಾಲಕನ ತಂದೆ ಸತೀಶ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ತನ್ನ ಮಗ ಸಾತ್ವಿಕ ಕೊಳವೆ ಬಾವಿಗೆ ಬಿದ್ದಿರುವುದನ್ನು ಆತನ ಕಾಲಿಗೆ ಕಟ್ಟಿರುವ ಗೆಜ್ಜೆ ಸದ್ದಿನಿಂದ ಪತ್ತೆ ಮಾಡಿದೆವು ಎಂದಿದ್ದಾರೆ.

ನನ್ನ ಕಂದ ಮನೆಯಲ್ಲಿ ಪುಟ ಪುಟನೆಂದು ಓಡಾಡುವಾಗ ಗೆಜ್ಜೆ ಇರಲೆಂದು ಕಾಲಿಗೆ ಬೆಳ್ಳಿಯ ಗೆಜ್ಜೆ ಹಾಕಿದ್ದೆವು. ನಿನ್ನೆಯಷ್ಟೇ ಕೊರಸಿದ್ದ ಎರಡು ಕೊಳವೆ ಬಾವಿಯಲ್ಲಿ ನೀರು ಕಾಣಿಸಿಕೊಂಡಿದ್ದ ಒಂದು ಕೊಳವೆ ಬಾವಿಗೆ ಪಂಪ್ ಜೋಡಿಸುವ ಕೆಲಸದಲ್ಲಿ ತೊಡಗಿದ್ದೆವು. ಇದ್ದಕ್ಕಿದ್ದಂತೆ ಮಗ ಸಾತ್ವಿಕ ಕಾಣೆಯಾದ. ಹೊಲದಲ್ಲಿ ಹುಡುಕುತ್ತಾ ಹೋದಾಗ ಮತ್ತೊಂದು ಕೊಳವೆ ಬಾವಿಯಿಂದ ಗೆಜ್ಜೆ ಸದ್ದು ಕೇಳಿಸಿತು. ಕೂಡಲೇ ಅಲ್ಲಿಗೆ ಧಾವಿಸಿ, ನೋಡಿದಾಗ ನನ್ನ ಮಗ ಸಾತ್ವಿಕ ಕೊಳವೆ ಬಾವಿಗೆ ಬಿದ್ದು ನರಳುತ್ತಿದ್ದ ಎಂದು ಸಾತ್ವಿಕನ ತಂದೆ ಸತೀಶ ಕಣ್ಣೀರು ಹಾಕುತ್ತಿದ್ದಾರೆ.

ಮಗನ ರಕ್ಷಣೆಗಾಗಿ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಹೇಗಾದರೂ ಮಾಡಿ ನನ್ನ ಮಗನನ್ನು ಸುರಕ್ಷಿತವಾಗಿ ನಮ್ಮ ಉಡಿಗೆ ಹಾಕಲಿ ಎಂದು ಕೈಮುಗಿಯುತ್ತಿದ್ದಾರೆ.

ಈ ಮಧ್ಯೆ ಜಿಲ್ಲಾಡಳಿತ ಸಾತ್ವಿಕನನ್ನು ಕೊಳವೆ ಬಾವಿಯಿಂದ ಸುರಕ್ಷಿತವಾಗಿ ರಕ್ಷಿಸಿ ಹೊರ ತರಲು ನಡೆಸಿರುವ ಕಾರ್ಯಾಚರಣೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಸಾತ್ವಿಕ ಸಂಬಂಧಿ ಸಂಗಮೇಶ, ಕೊಳವೆ ಬಾವಿಯ 16 ಅಡಿ ಆಳದಲ್ಲಿ ಮಗುವಿನ ಕಾಲು ಅಲುಗಾಡುತ್ತಿದೆ. ಅಧಿಕಾರಿಗಳ ಪ್ರಾಮಾಣಿಕ ಕಾರ್ಯಾಚರಣೆಯಿಂದ ನಮ್ಮ ಕಂದ ಸುರಕ್ಷಿತವಾಗಿ ಹೊರ ಬಂದು‌ ಮರಳಿ ಹೆತ್ತ ಒಡಲು ಸೇರಿದರೆ ಸಾಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.