ವಿಧಾನಸಭೆಗೆ ವಿಜಯೇಂದ್ರ ಸ್ಪರ್ಧೆ ಖಚಿತ: ಸಾಮೂಹಿಕ ನಾಯಕತ್ವದಲ್ಲಿ ಪ್ರಚಾರ:  ಬಿಎಸ್‌ವೈ

ಇನ್ನೂ ಹತ್ತು ವರ್ಷ ರಾಜಕೀಯದಲ್ಲಿದ್ದು, ಪಕ್ಷ ಸಂಘಟಿಸುತ್ತೇನೆ  

Team Udayavani, Jun 8, 2022, 9:45 AM IST

1Bsy

ವಿಜಯಪುರ: ಯಡಿಯೂರಪ್ಪ ಅವರು ಮೇಲ್ಮನೆ ಚುನಾವಣೆಗೆ ತಮ್ಮ ಮಗ ವಿಜಯೇಂದ್ರಗೆ ಟಿಕೆಟ್ ಕೊಡಿಸಲಾಗಲಿಲ್ಲ. ಬಿಜೆಪಿ ಯಡಿಯೂರಪ್ಪ ಅವರನ್ನು ಪಕ್ಕಕ್ಕೆ ಸರಿಸಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆ ಅರ್ಥವಿಲ್ಲ. ವಿಧಾನಸಭೆ ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಿ ಗೆಲ್ಲುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ಕುಟುಂಬದವರಿಗೆ ಟಿಕೇಟ್ ಕೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ‌ ತೀರ್ಮಾನ ತೆಗೆದುಕೊಂಡಿದ್ದು‌ ಎಲ್ಲರಿಗೂ  ಗೊತ್ತಿರುವುದೇ. ಆದರೆ ವಿಧಾನಸಭಾ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸಲಿದ್ದು, ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲಲಿದ್ದಾರೆ ಎಂದು ತಮ್ಮ ಮಗನ ರಾಜಕೀಯ ಸಾಮರ್ಥ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು‌ ಪಕ್ಕಕ್ಕೆ ಸರಿಸಿದೆ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ. ಬಿಜೆಪಿ‌ ನನಗೆ ಕೊಟ್ಟಿರುವ ಸ್ಥಾನಮಾನಗಳು  ಬೇರೆ ಯಾರಿಗೂ‌ ಸಿಕ್ಕಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ, ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಹೀಗೆ ಎಲ್ಲಾ ಅವಕಾಶ ಸಿಕ್ಕಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ರಾಜೀನಾಮೆ‌ ಕೊಟ್ಟು ಬಂದವನು. ಆದರೂ ರಾಜ್ಯದ ಜನತೆ, ಪಕ್ಷ ನನ್ನ ಮೇಲೆ ಅದೇ, ಪ್ರೀತಿ, ವಿಶ್ವಾಸ, ಗೌರವ ಇರಿಸಿಕೊಂಡಿರುವುದು ನನಗೆ ಸಂತೃಪ್ತಿ ನೀಡಿದೆ ಎಂದರು.

ಇದನ್ನೂ ಓದಿ:ಕರಾವಳಿಯಲ್ಲಿ ಸೇನಾಪೂರ್ವ ತರಬೇತಿ ಕೇಂದ್ರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಭವಿಷ್ಯದ ದಿನಗಳಲ್ಲಿ ಪಕ್ಷ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲು ಏನೇನು ಪ್ರಯತ್ನ ಮಾಡಬೇಕೋ ಅದನ್ನು ಮಾಡೇ ಮಾಡುತ್ತೇವೆ. ಸಾಮೂಹಿಕ ನಾಯಕತ್ವದಲ್ಲಿ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಆದರೆ ಸಿದ್ದರಾಮಯ್ಯ ತಾವು ಅಧಿಕಾರಕ್ಕೆ ಬರುತ್ತೇವೆಂದು ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕುಟುಕಿದರು.

ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇರುವುದಾಗಿ ಮಂಗಳವಾರ ಮೇಲ್ಮನೆ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯನ್ನು ಪುನರುಚ್ಛರಿಸಿದ ಯಡಿಯೂರಪ್ಪ, ಪಕ್ಷದ ಸಂಘಟನೆಗಾಗಿ ರಾಜ್ಯದಲ್ಲಿ ಓಡಾಡಲು ನಿಶ್ಚಯಿಸಿದ್ದೇನೆ. ಹೀಗಾಗಿ ರಾಜ್ಯದ ಜನತೆಯ ಆಶೀರ್ವಾದದಿಂದ ಆರೋಗ್ಯ ಚೆನ್ನಾಗಿದ್ದರೆ ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇದ್ದು ಪಕ್ಷ ಸಂಘಟಿಸುತ್ತೇನೆ ಎಂದರು.

ರಾಜ್ಯದ ಉದ್ದಗಲಕ್ಕೂ‌ ಪ್ರವಾಸ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ವಿಧಾನಸಭೆಗೆ ನಡೆಯುವ ಚುನಾವಣೆಗೆ ಸಾಮೂಹಿಕ ನೇತ್ರತ್ವದಲ್ಲಿ ಜನತೆಯ ಮುಂದೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ಸೇರಿಕೊಂಡು ಕೆಲಸ ಮಾಡಿ‌,  ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.