ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಂಚಾರಿ ವಿಜಯ್ ಅಂತಿಮ ಸಂಸ್ಕಾರ : ಕುಪ್ಪೂರು ಶ್ರೀ
Team Udayavani, Jun 15, 2021, 1:50 PM IST
ಚಿಕ್ಕಮಗಳೂರು : ಬೈಕ್ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ಇಂದು ಮುಂಜಾನೆ ನಟ ಸಂಜಾರಿ ವಿಜಯ್ ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ ವಿಜಯ್ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರಾದ ಚಿಕ್ಕಮಗಳೂರಿನಲ್ಲಿ ನಡೆಸಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದ ಸ್ಥಳಕ್ಕೆ ಕುಪ್ಪೂರು ಶ್ರೀ ಡಾ.ಯತೀಶ್ವರ ಶಿವಚಾರ್ಯ ಆಗಮಿಸಿದ್ದಾರೆ.
ಇನ್ನು ಶ್ರೀ ಡಾ.ಯತೀಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದೇ ವೇಳೆ ಮಾತನಾಡಿದ ಸ್ವಾಮೀಜಿ, ಸಂಚಾರಿ ವಿಜಯ್ ಸಾವು ನಮ್ಮ ಸಮಾಜಕ್ಕೆ ನುಂಗಲಾರದ ತುತ್ತಾಗಿದೆ. ಯಾವುದೇ ಪಾತ್ರ ಕೊಟ್ರೂ ಅದಕ್ಕೆ ಜೀವ ತುಂಬುವ ಶಕ್ತಿ ವಿಜಯ್ ಗೆ ಇತ್ತು. ಅವರ ಹುಟ್ಟೂರಿನಲ್ಲೇ ಸಂಸ್ಕಾರ ಆಗುತ್ತಿರುವುದು ಸಂತೋಷ ಎಂದು ಹೇಳಿದ್ದಾರೆ.
ಬಂಧುಗಳಿರಬೇಕು, ಜೊತೆಗೆ ಮಿತ್ರರೂ ಇರಬೇಕು. ಸಂಚಾರಿ ವಿಜಯ್ ಒಳ್ಳೆಯ ಸ್ನೇಹಿತರನ್ನ ಸಂಪಾದಿಸಿದ್ದಾರೆ. ವೀರಶೈವ ಶೋಡಶ ಸಂಸ್ಕಾರಗಳನ್ನ ನಡೆಸಲಾಗುತ್ತಿದೆ ಎಂದು ಕುಪ್ಪೂರು ಶ್ರೀ ಡಾ.ಯತೀಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು