ಸಂವಿಧಾನ ಸಂಭಾಷಣೆ ಕಾರ್ಯಕ್ರಮ: ಸರ್ಕಾರದ ಆದೇಶವೇ ಉಲ್ಲಂಘನೆ


Team Udayavani, Jan 23, 2019, 12:40 AM IST

140.jpg

ಬೆಂಗಳೂರು: ಸಿದ್ಧಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಎಲ್ಲ ಅಧಿಕೃತ ಕಾರ್ಯಕ್ರಮ ರದ್ದುಗೊಳಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮ ಆಯೋಜಿಸಿ ಸರ್ಕಾರದ ಆದೇಶ ಉಲ್ಲಂಘಸಿದೆ.

ಅಷ್ಟೇ ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಹೇಳಿಕೆಗಳ ಮೂಲಕ ವಿವಾದಕ್ಕೊಳಗಾಗಿರುವ ಕನ್ಹಯ್ಯಕುಮಾರ್‌ ಹಾಗೂ ಅಸಾವುದ್ದೀನ್‌ ಓವೈಸಿ ವೇದಿಕೆ ಹಂಚಿಕೊಂಡಿದ್ದು ಸಮ್ಮಿಶ್ರ ಸರ್ಕಾರದ ವಿರುದಟಛಿದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರ್ಕಾರವು ಸಿದ್ದಗಂಗಾ ಶ್ರೀಗಳಿಗೆ ಅಗೌರವ ತೋರಿದೆ. ರಾಜ್ಯ ಸರ್ಕಾರವೇ ಹೊರಡಿಸಿದ ಆದೇಶ ಉಲ್ಲಂಘನೆಯಾಗಿದೆ. ಸಮಾಜ ಕಲ್ಯಾಣ ಇಲಾಖೆಯು ಸರ್ಕಾರದ ಆದೇಶಕ್ಕೆ ಬೆಲೆ ಇಲ್ಲದಂತೆ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿಯವರು ಸಹ ಪ್ರತಿಭಟನೆ ವಿಚಾರ ಕೇಳಿ ಕಾರ್ಯಕ್ರಮ ರದ್ದುಗೊಳಿಸಿ ಎಂದು ಸೂಚಿಸಿದ್ದರು. ಆದರೂ ಖಾಸಗಿಯಾಗಿ ಮಾಡಲಾಗಿದೆ ಎಂಬ ನೆಪ ಹೇಳಿ ಸಂವಾದ ಮುಂದುವರಿಸಿದ್ದು ಕನ್ಹಯ್ಯಕುಮಾರ್‌, ಅಸಾವುದ್ದೀನ್‌ ಓವೈಸಿ ಭಾಗಿಯಾಗಿದ್ದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

“ಸ್ವಾಮೀಜಿಗಳಿಗೆ ಅರ್ಪಿಸಿ ಕಾರ್ಯಕ್ರಮ ಆರಂಭಿಸಿದ್ದೆವು’
ಬೆಂಗಳೂರು: ಸಂವಿಧಾನ ಚರ್ಚೆಗಳು ಕಾರ್ಯಕ್ರಮ ವನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರದ ನಿರ್ದೇಶನ ಇತ್ತು. ಅದರಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಿದ್ದಗಂಗಾ
ಶ್ರೀಗಳಿಗೆ ಅರ್ಪಿಸಿ, ಒಂದು ನಿಮಿಷ ಮೌನಾಚರಣೆ ಮಾಡಿಯೇ ಆರಂಭಿಸಲಾಗಿತ್ತು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕಳೆದ ಮೂರು ತಿಂಗಳಿಂದ ಕಾರ್ಯಕ್ರಮದ ಸಿದ್ದತೆ ಕುರಿತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ
ಮಟ್ಟದಲ್ಲಿ ಪ್ರಚಾರ ನಡೆಸಲಾಗಿತ್ತು. ಸಂವಿಧಾನದ ಬಗ್ಗೆಚರ್ಚಿಸಲು ಅಂತಾರಾಷ್ಟ್ರೀಯ ಲೇಖಕರು, ಚಿಂತಕರು ಎಲ್ಲರೂ ಬರಲು ಒಪ್ಪಿಗೆ ಸೂಚಿಸಿದ್ದರು. ಸ್ವಾಮೀಜಿಗಳ ದೇಹಾಂತ್ಯದ ನಂತರ ಸರ್ಕಾರದ ಮುಖ್ಯ
ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಗಿತ್ತು. ಅವರ ಸೂಚನೆಯಂತೆ ಸರಳವಾಗಿ ಆಚರಿಸಿ, ರಾಜ್ಯ ಸರ್ಕಾರದ ವತಿಯಿಂದ ಯಾರೂ ಪಾಲ್ಗೊಳ್ಳದಂತೆ ಸೂಚಿಸಿದ್ದರು. ಅದರಂತೆ ಸರ್ಕಾರದ ಪ್ರತಿನಿಧಿಗಳ ಭಾಷಣವನ್ನು ರದ್ದು ಪಡಿಸಲಾಗಿತ್ತು. ಮಾಜಿ ಉಪ ರಾಷ್ಟ್ರಪತಿ ಆಗಮಿಸಿದ್ದರು. ಆರಂಭದಲ್ಲಿಯೇ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಶ್ರದ್ದಾಂಜಲಿ ಸಲ್ಲಿಸಿ, ಇಡೀ ಕಾರ್ಯಕ್ರಮವನ್ನು ಅವರಿಗೆ ಅರ್ಪಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕನ್ಹಯ್ಯ ಕುಮಾರ್‌, ಅಸಾವುದ್ದೀನ್‌ಓವೈಸಿ ಅವರನ್ನು ಕರೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಆದರೆ, ಕಾರ್ಯಕ್ರಮಕ್ಕೆ ಬಿಜೆಪಿಯ ನಾಯಕರಾದ ವಾಮನಾಚಾರ್ಯ, ಗೋ.ಮಧುಸೂಧನ್‌, ಶೇಷಾದ್ರಿ ಅಯ್ಯರ್‌, ರಾಕೇಶ್‌ ಸಿನ್ಹಾ, ಆರ್‌ ಎಸ್‌ಎಸ್‌ ಪ್ರಚಾರಕರು ಹಾಗೂ ವಿವೇಕ್‌ ರೆಡ್ಡಿ, ಕಮ್ಯುನಿಷ್ಟರು ಎಲ್ಲರೂ ಆಗಮಿಸಿದ್ದರು.

ಸಂವಿಧಾನದಲ್ಲಿ ಎಲ್ಲರ ಅಭಿಪ್ರಾಯಗಳಿಗೂ ಅವಕಾಶ ಇದೆ. ಹೀಗಾಗಿ ಎಲ್ಲರ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇದೆ ಎನ್ನುವ ಕಾರಣಕ್ಕೆ ಎಲ್ಲರನ್ನೂ ಕರೆಯಲಾಗಿತ್ತು. ಇದರಲ್ಲಿ ಯಾವುದೇ ವೈಯಕ್ತಿಕ ಪ್ರಚಾರದ ಉದ್ದೇಶವಿಲ್ಲ. ಆದರೆ, ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ ನಂತರ ಸರ್ಕಾರದ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.