Vishwakarma Jayanti; ವಿಶ್ವಕರ್ಮರಿಗೆ ನನ್ನಿಂದಲೇ ರಾಜಕೀಯ ಪ್ರಾತಿನಿಧ್ಯ :ಸಿದ್ದರಾಮಯ್ಯ
ಮನುಷ್ಯ ಧರ್ಮ ಪರಮಶ್ರೇಷ್ಠ
Team Udayavani, Sep 17, 2023, 11:50 PM IST
ಬೆಂಗಳೂರು: ಎಲ್ಲ ಧರ್ಮಗಳಿಗಿಂತಲೂ ಮನುಷ್ಯ ಧರ್ಮ ಮುಖ್ಯ. ಆ ಹಿನ್ನೆಲೆಯಲ್ಲಿ ನಾವೆಲ್ಲರೂ ಮನುಷ್ಯರಾಗಿ ಬಾಳುವುದನ್ನು ಕಲಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾರನ್ನೂ ಯಾರಿಗೂ ಹೋಲಿಕೆ ಮಾಡಬಾರದು ಎಂದು ಉದಾಹರಣೆ ಸಹಿತ ಹೇಳಿದರು.
ಹೆಚ್ಚು ಅನುದಾನ ಭರವಸೆ ವಿಶ್ವಕರ್ಮ ಸಮುದಾಯದ ಮುಖಂಡರು ಮಕ್ಕಳ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೇಳಿದ್ದಾರೆ. ಜತೆಗೆ ಕರಕುಶಲ ಕರ್ಮಿಗಳ ಇಲಾಖೆ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಜತೆಗೆ ನಿಮಗಕ್ಕೆ ಹೆಚ್ಚಿನ ಅನುದಾನ ನೀಡಲೂ ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇನೆ ಎಂದರು.
ವಿಶ್ವಕರ್ಮರಿಗೆ ನನ್ನಿಂದಲೇ ರಾಜಕೀಯ ಪ್ರಾತಿನಿಧ್ಯ
ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿದ್ದೆ. ಬಿಂಬಾರಾಯ್ಕರ್, ರಘು ಆಚಾರ್ಯ ಸಹಿತ ವಿಶ್ವಕರ್ಮ ಸಮುದಾಯದ ಹಲವರಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರ ವನ್ನು ಒದಗಿಸಿಕೊಟ್ಟಿದ್ದೆ. ರಘು ಆಚಾರ್ಯ ದುಡುಕಿ ಕಾಂಗ್ರೆಸ್ ತೊರೆದರು. ನಾನು ಎಷ್ಟು ಹೇಳಿದರೂ ಕೇಳಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪ್ರತಿಯೊಂದು ಜಾತಿ, ಸಮುದಾಯಗಳಿಗೂ ಅವಕಾಶ ಮತ್ತು ಅಧಿಕಾರವನ್ನು ನಿರಂತರವಾಗಿ ಒದಗಿಸುತ್ತಲೇ ಬಂದಿದೆ. ಆ ಮೂಲಕ ಹಿಂದುಳಿದ ಸಮುದಾಯಗಳಿಗೆ, ದಲಿತ ಸಮುದಾಯಗಳಿಗೂ ಶಕ್ತಿ ತುಂಬುತ್ತಿದೆ ಎಂದು ಹೇಳಿದರು.
ಅಧ್ಯಯನ ಕೇಂದ್ರ ಸ್ಥಾಪನೆ
ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಜತೆಗೆ ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯನ್ನೂ ಪರಿಶೀಲಿಸಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿ ಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ ಹೆಚ್ಚು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಹಿಂದೇಟು ಹಾಕುವುದಿಲ್ಲ
ಸರಕಾರ ಆಚರಿಸುವ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಹಿಂದೇಟು ಹಾಕುವುದಿಲ್ಲ. ಸರಕಾರದ ವತಿಯಿಂದ ಜನಾಂಗದ ಕಾರ್ಯಕ್ರಮ ಆಚರಿಸಿದರೆ ಹೆಚ್ಚು ಮಹತ್ವ ಇರುತ್ತದೆ. ಹಾಗಾಗಿ ಸರಕಾರವೇ ಅನೇಕ ಹಿಂದುಳಿದ ಜಯಂತ್ಯೋತ್ಸವವನ್ನು ಆಚರಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ