ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬಾರದು: ಶಿವರಾಮ ಹೆಬ್ಬಾರ್
Team Udayavani, Aug 28, 2020, 3:09 PM IST
ಹುಬ್ಬಳ್ಳಿ: ನಾವು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಂದಾಗ ಆ ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಿರಿಯರಾದ ಎಚ್. ವಿಶ್ವನಾಥ್ ಅನಗತ್ಯವಾಗಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಯಾವ ಸಂದರ್ಭದಲ್ಲಿ ಟಿಪ್ಪುಸುಲ್ತಾನ್ ಕುರಿತು ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ಅವರಿಗೆ ಕರೆ ಮಾಡಿದರೆ, ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದರು.
ಇಎಸ್ ಐ ಆಸ್ಪತ್ರೆಗಳಲ್ಲಿ ಪ್ರತಿವರ್ಷ ಸಾಕಷ್ಟು ಔಷಧಿಗಳು ಉಳಿಯುತ್ತಿವೆ. ಆದ್ದರಿಂದ ಇಎಸ್ಐ ಕಾರ್ಡ್ ಇಲ್ಲದವರಿಗೂ ಔಷಧಿಗಳನ್ನು ಕೊಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದಕ್ಕೆ ಕಾನೂನಿನಲ್ಲಿ ತೊಡಕುಗಳಿದ್ದು, ಬೆಂಗಳೂರಿನಲ್ಲಿ ಸೆ. 4 ಮತ್ತು 5ರಂದು ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ