ಕರಾವಳಿಯ ಸಾಧು ಸಂತರ ಸಮಾಗಮ
Team Udayavani, Jul 1, 2022, 11:44 PM IST
ಬೆಂಗಳೂರು: ಶ್ರೀಪೂರ್ಣಪ್ರಜ್ಞ ವಿದ್ಯಾಪೀಠ ದಲ್ಲಿರುವ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ವೃಂದಾವನದಲ್ಲಿ ಶುಕ್ರವಾರ ಕರಾವಳಿಯ ಸಾಧು ಸಂತರ ಸಮಾಗಮ-ಸಂದೇಶ ಕಾರ್ಯಕ್ರಮ “ಸಾಧು ಸಂಗಮ’ ನಡೆಯಿತು.
ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ, ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ, ಮಂಗಳೂರು ರಾಮಕೃಷ್ಣಾಶ್ರಮದ ಸ್ವಾಮೀ ರಘುರಾಮಾನಂದಜೀ, ಪಡುಕುತ್ಯಾರು ಆನೆಗುಂದಿ ಸರಸ್ವತೀ ಪೀಠದ ಶ್ರೀಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ ಸಂಸ್ಥಾನದ ಶ್ರೀವಿಖ್ಯಾತಾನಂದ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸ್ವಾಮೀಜಿ, ಮೂಡುಬಿದಿರೆ ಕರಿಂಜೆ ಶ್ರೀಮುಕ್ತಾನಂದ ಸ್ವಾಮೀಜಿ, ಬೈಲೂರು ರಾಮಕೃಷ್ಣಾಶ್ರಮದ ಸ್ವಾಮಿ ಪ್ರಬೋಧಾನಂದಜೀ ಸಂದೇಶ ನೀಡಿದರು.