ರೋಗನಿರೋಧಕ ಶಕ್ತಿ ಹೆಚ್ಚಿಸುವ ಬಗ್ಗೆ ಜಾಗೃತಿ ಮೂಡಿಸಲು ಪತ್ರ ಬರೆದಿದ್ದೇನೆ : ಕಾಗೇರಿ
Team Udayavani, Jun 30, 2021, 6:04 PM IST
ಶಿರಸಿ: ರಾಜ್ಯದ ಎಲ್ಲಡೆ ಸಾಂಕ್ರಾಮಿಕ ರೋಗಗಳ ವಿರುದ್ದ ಹೋರಾಡಲು ಅನುಕೂಲ ಆಗುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜಾಗೃತಿ ಅಭಿಯಾನ ನಡೆಸಬೇಕು. ಈ ಕುರಿತು ಎಲ್ಲ ಶಾಸಕರಿಗೂ ಪತ್ರ ಬರೆದಿರುವದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ನಗರದಲ್ಲಿ ಹಮ್ಮಿಕೊಂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಜನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದ ಸ್ವಾಸ್ಥ್ಯ ಹೆಚ್ಚಬೇಕು. ಕೊರೋನಾ ಅಲೆಗಳಿಗೆ ಮಾತ್ರವಲ್ಲ, ಯಾವುದೇ ಸಾಂಕ್ರಾಮಿಕ ರೋಗಕ್ಕೂ ನಮ್ಮೊಳಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಇದಕ್ಕೆ ಸರಕಾರದ ಜೊತೆಗೆ ಸಮಾಜದ ಎಲ್ಲ ಸ್ಥರದ ಜನರ ಸಹಕಾರ ಬೇಕಿದೆ ಎಂದರು.
ಇದೇ ವೇಳೆ ಪ್ರಸಿದ್ದ ವೈದ್ಯರಾದ ಡಾ. ಜಗದೀಶ ಯಾಜಿ, ಡಾ. ಜ್ಞಾನ ಪ್ರಕಾಶ ಕಾರಂತ, ಡಾ. ವೆಂಕಟ್ರಮಣ ಹೆಗಡೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಎಸಿ ಆಕೃತಿ ಬನ್ಸಾಲ್, ತಹಸೀಲ್ದಾರ ಎಂ.ಆರ್.ಕುಲಕರ್ಣಿ, ಡಿವೈಎಸ್ಪಿ ರವಿ ನಾಯಕ, ತಾಲೂಕು ವೈದ್ಯಾಧಿಕಾರಿ ಡಾ. ವಿನಾಯಕ ಕಣ್ಣಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ