ಎಂಜಿನಿಯರಿಂಗ್ ಪರೀಕ್ಷೆ: ವಿಟಿಯು ಮಾರ್ಗಸೂಚಿ ಪ್ರಕಟ
Team Udayavani, Jul 26, 2020, 6:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಉಳಿದ ವಿದ್ಯಾರ್ಥಿಗಳ ತೇರ್ಗಡೆ ಕುರಿತಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಅಂತಿಮ ಸೆಮಿಸ್ಟರ್ಗೆ
ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆ. 1ರಿಂದ 14ರ ವರೆಗೆ ತರಗತಿಗಳು ನಡೆಯಲಿವೆ. ಆದರೆ ಇದು ಕಡ್ಡಾಯವಲ್ಲ. ಅಂತಿಮ ಸೆಮಿಸ್ಟರ್ನ ಯಾವ ವಿದ್ಯಾರ್ಥಿಯೂ ಭಾಗವಹಿಸಬಹುದು. ಆ. 17ರಿಂದ 21ರವರೆಗೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ವೈವಾ ಹಾಗೂ 24ರಿಂದ 30ರವರೆಗೆ ಪರೀಕ್ಷೆಯನ್ನು ಆಫ್ಲೈನ್ ನಲ್ಲೇ (ಸಾಂಪ್ರದಾಯಿಕ ಪದ್ಧತಿ) ನಡೆಸಲಾಗುವುದು. ಸೆ. 15ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ. 1ರಿಂದ 2020-21ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿವೆ ಎಂದು ವಿಟಿಯು ತಿಳಿಸಿದೆ.
ಅಂತಿಮ ಸೆಮಿಸ್ಟರ್ನ ಸ್ನಾತಕ ಮತ್ತು ಸ್ನಾತಕೋತ್ತರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈವಾ ಹಾಗೂ ಪರೀಕ್ಷೆ ಸಾಂಪ್ರದಾಯಿಕ ಪದ್ಧತಿಯಂತೆ ನಡೆಯಲಿದೆ. ಪ್ರಾಜೆಕ್ಟ್ ವರ್ಕ್ಗೆ ಸಂಬಂಧಿಸಿ ವೈವಾಗಳನ್ನು ಆನ್ಲೈನ್ ಮೂಲಕ ಕಾಲೇಜು ಹಂತದಲ್ಲಿ ನಡೆಸಲಾಗುವುದು. ಅಂತಿಮ ವರ್ಷದ ಬ್ಯಾಕ್ಲಾಗ್ ವಿದ್ಯಾರ್ಥಿಗಳಿಗೂ ಸಾಂಪ್ರದಾಯಿಕ ಪದ್ಧತಿಯಲ್ಲೇ ಪರೀಕ್ಷೆ ನಡೆಯಲಿದೆ. ಬರೆಯಲಾಗದವರಿಗೆ ಮುಂದಿನ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.
ತೇರ್ಗಡೆ
ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸೆಮಿಸ್ಟರ್ಗಳ ವಿದ್ಯಾರ್ಥಿಗಳನ್ನು ಯುಜಿಸಿ ಸೂಚಿಸಿರುವಂತೆ ಹಿಂದಿನ ಸೆಮಿಸ್ಟರ್ ಮತ್ತು ಆಂತರಿಕ ಪರೀಕ್ಷೆ ಅಂಕದ ಆಧಾರದಲ್ಲಿ ತೇರ್ಗಡೆ ಮಾಡಲಾಗುತ್ತದೆ. ಇವರಿಗೆ ವೈವಾ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸಬಹುದು. ಕ್ಯಾರಿ ಫಾರ್ವರ್ಡ್ ವ್ಯವಸ್ಥೆ ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ವಿದ್ಯಾರ್ಥಿಗಳಿಗೆ ಆನ್ಲೈನ್ ಇಂಟರ್ನ್ ಶಿಪ್ಗೆ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!