“ಕಾಂಗ್ರೆಸ್ನಿಂದ ಹಣ ಪಡೆದು ಬಿಜೆಪಿಗೆ ಮತ ಹಾಕಿ’
Team Udayavani, Mar 31, 2017, 7:07 AM IST
ಗುಂಡ್ಲುಪೇಟೆ: ಚುನಾವಣೆಯನ್ನು ಗೆಲ್ಲಲೇ ಬೇಕೆಂಬ ಹಠತೊಟ್ಟಿರುವ ಕಾಂಗ್ರೆಸ್, ಪ್ರತಿ ಓಟಿಗೆ ನಾಲ್ಕು ಸಾವಿರ ರೂ.ಹಂಚುತ್ತಿರುವ ಮಾಹಿತಿಯಿದೆ. ಹೀಗಾಗಿ, ಮತದಾರರು ಕಾಂಗ್ರೆಸ್ನಿಂದ ಹಣ ಪಡೆದು, ಬಿಜೆಪಿಗೆ ಮತ ಹಾಕಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಪರ ಚುನಾವಣಾ ಪ್ರಚಾರ ಕೈಗೊಂಡ ಅವರು, “ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೃಪಾಪೋಷಿತ ನಾಟಕ ಮಂಡಳಿ, ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಗೆಲ್ಲಲು
ಕಾನೂನು ಬಾಹಿರ ತಂತ್ರಗಳನ್ನು ಆರಂಭಿಸಿದೆ. ಮತವೊಂದಕ್ಕೆ ನಾಲ್ಕು ಸಾವಿರ ರೂಪಾಯಿ ನೀಡುತ್ತಿದೆ ಎಂಬ ಮಾಹಿತಿಯಿದೆ.
ಹೀಗಾಗಿ, ಕಾಂಗ್ರೆಸ್ನವರಿಂದ ಹಣ ಪಡೆದುಕೊಳ್ಳಿ. ಆದರೆ, ಬಿಜೆಪಿಗೆ ಮಾತ್ರ ಮತ ಹಾಕಿ’ ಎಂದರು. “ಕಾಂಗ್ರೆಸ್ನವರು ಹಣ ಹಂಚುತ್ತಿರುವುದು ಅವರ ಅಪ್ಪನ ಮನೆಯ ದುಡ್ಡಲ್ಲ. ಸಾರ್ವಜನಿಕರ ದುಡ್ಡು. ಜನಸಾಮಾನ್ಯರ ತೆರಿಗೆ ಹಣ. ಹೀಗಾಗಿ, ನೀವು ಹಣ ಪಡೆದುಕೊಳ್ಳಿ. ಅದರಲ್ಲಿ ತಪ್ಪೇನೂ ಇಲ್ಲ’ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ