ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ

ನ. 29, ಡಿ. 6 ಮತ್ತು 13ರಂದು ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Team Udayavani, Nov 29, 2020, 6:16 AM IST

Voterr

ಸಾಂದರ್ಭಿಕ ಚಿತ್ರ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರ್ಪಡೆ ಮಾಡಲು, ವಿಳಾಸ ಬದಲಾವಣೆ ಸೇರಿದಂತೆ ಇತರ ತಿದ್ದುಪಡಿ ಮಾಡಲು ಬಯಸಿದ್ದೀರಾ? ಹಾಗಿದ್ದರೆ ಚುನಾವಣ ಆಯೋಗ ನೀಡಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

“ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2021’ರ ಅಂಗವಾಗಿ ಮತದಾರರ ಪಟ್ಟಿ ಯಲ್ಲಿ ಹೆಸರು ಸೇರ್ಪಡೆಗೆ ಚುನಾವಣ ಆಯೋಗ ವಿಶೇಷ ಅಭಿಯಾನ ಹಮ್ಮಿ ಕೊಂಡಿದೆ. ನ. 29, ಡಿ. 6 ಮತ್ತು ಡಿ. 13ರಂದು ರಾಜ್ಯವ್ಯಾಪಿ ಅಭಿಯಾನ ನಡೆಯಲಿದ್ದು, ಆಯಾ ದಿನ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಪ್ರತೀ ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ಅಥವಾ ವಿಳಾಸ ಬದಲಾವಣೆ, ತಿದ್ದುಪಡಿಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

2021ರ ಜ. 1ಕ್ಕೆ 18 ವರ್ಷ ತುಂಬುವ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಗಳನ್ನು ನೋಂದಣಿ ಮಾಡಿಸಿ ಕೊಳ್ಳಬಹುದು. ಇದರ ಜತೆಗೆ ಹೆಸರು, ವಿಳಾಸ ಇನ್ನಿತರ ತಿದ್ದುಪಡಿಗಳಿದ್ದರೆ ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದಕ್ಕೂ ಅವಕಾಶ ಇದೆ.

ಜನರಿಗೆ ಮನವಿ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದ ಸಂಬಂಧ ಈಗಾಗಲೇ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತೀ ಮತಗಟ್ಟೆ ಅಧಿ ಕಾರಿಯ ವ್ಯಾಪ್ತಿಗೆ 300 ಮನೆಗಳು ಬರುತ್ತವೆ. ನಿಗದಿತ ದಿನಾಂಕಗಳ ವಿಶೇಷ ಅಭಿಯಾನದ ಹೊರತಾಗಿ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶದ ಮನೆ ಮನೆ ಭೇಟಿ ಸಹ ನೀಡಲಿದ್ದಾರೆ. ಮತಗಟ್ಟೆ ಅಧಿಕಾರಿಗಳು ಮನೆಗೆ ಬರುತ್ತಾರೆ ಎಂದು ಕಾದು ಕುಳಿತುಕೊಳ್ಳದೆ ಮತಗಟ್ಟೆ ಕಚೇರಿಗೆ ತೆರಳಿ ಹೆಸರು ನೋಂದಣಿ ಮತ್ತು ಇನ್ನಿತರ ಬದಲಾವಣೆ ಮಾಡಿಕೊಳ್ಳುವಂತೆ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗೆ ಟೋಲ್‌ ಫ್ರಿ ಸಂಖ್ಯೆ 1950 ಮತ್ತು www.ceokarnataka.kar.nic.in ಸಂಪರ್ಕಿಸಬಹುದು.

ಯುವ ಮತದಾರರು, ವಿಕಲಚೇತನ ಮತದಾರರನ್ನು ಗಮನ ದಲ್ಲಿಟ್ಟುಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ನಡೆಸ ಲಾಗುತ್ತಿದೆ. ಸಾಮಾನ್ಯ ಮತದಾರರು ಕೂಡ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮತದಾನ ಪ್ರತೀ ಪ್ರಜೆಯ ಸಾಂವಿಧಾನಿಕ ಹಕ್ಕು. ಆ ಹಕ್ಕಿಗೆ ಅರ್ಹರಾಗಲು ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದು ಆವಶ್ಯಕ.
-ಡಾ| ಸಂಜೀವ ಕುಮಾರ್‌,
ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.