ಪೇಜಾವರ ಶ್ರೀಗಳ ವಿರುದ್ಧ ಕಿಡಿ ಕಾರಿದ ಶ್ರೀನಿವಾಸ್ ಪ್ರಸಾದ್
Team Udayavani, Dec 30, 2017, 4:18 PM IST
ಮೈಸೂರು : ಸಂವಿಧಾನ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ, ಬಿಜೆಪಿ ವಕ್ತಾರ ಗೋ ಮಧುಸೂದನ್ ಮತ್ತು ಪೇಜಾವರ ಶ್ರೀಗಳ ವಿರುದ್ಧ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಶ್ರೀನಿವಾಸ್ ಪ್ರಸಾದ್ ‘ಪ್ರಧಾನಿ ಮೋದಿ ಅವರ ಸರ್ಕಾರದಲ್ಲಿ ಅನಂತ್ ಕುಮಾರ್ ಹೆಗಡೆಯನ್ನು ಮಂತ್ರಿ ಮಾಡಿರುವುದು ಅವಮಾನ. ನಮ್ಮ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದುದ್ದು’ ಎಂದರು.
‘ಗೋಮಧುಸೂಧನ್ ಗೆ 2 ಬಾರಿ ಎಂಎಲ್ಸಿ ಆದರೂ ಬುದ್ದಿ ಬಂದಿಲ್ಲ.ಎಲ್ಲರೂ ಅವರನ್ನು ಗೋ ಅನ್ನುತ್ತಾರೆ ಕಮ್ ಅನ್ನುವುದಿಲ್ಲ’ ಎಂದು ಲೇವಡಿ ಮಾಡಿದರು.
‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ’ ಎಂದು ಹೇಳಿಕೆ ನೀಡಿದ್ದ ಪೇಜಾವರ ಶ್ರೀಗಳ ವಿರುದ್ಧ ಕಿಡಿ ಕಾರಿ ‘ಅವರು ಮಠದ ಕೆಲಸಗಳನ್ನು ನೋಡಿಕೊಂಡು ಇರಲಿ, ಎಲ್ಲಾ ವಿಚಾರಕ್ಕೂ ಮಾತನಾಡುವುದು ಬೇಡ. ಶೃಂಗೇರಿ ಮಠ, ಪರಕಾಲ ಮಠ ಸೇರಿದಂತೆ ಹಲವು ಮಠಗಳಿವೆ, ಯಾವುದಾದರೂ ಹೇಳಿಕೆ ನೀಡುತ್ತಾರೆಯೇ? ಅವರಷ್ಟಕ್ಕೆ ಕೆಲಸ ಮಾಡಿಕೊಂಡು ಇಲ್ಲವೆ’ ಎಂದು ಪ್ರಶ್ನಿಸಿದರು.
‘ಅಂಬೇಡ್ಕರ್ ನಮಗೆ ಆಧ್ಯಾತ್ಮಿಕ ನಾಯಕ.ರಾಜಕೀಯ ಮುಖ್ಯವಲ್ಲ, ಅಂಬೇಡ್ಕರ್ ಅವರೇ ನಮಗೆ ಮುಖ್ಯ’ ಎಂದರು.
‘ಸಂವಿಧಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕಿತ್ತು’ ಎಂದು ವರಿಷ್ಠರ ವಿರುದ್ಧವೂ ಅಸಮಧಾನ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ