ವೈಟಿಪಿಎಸ್ ಲೋಕಾರ್ಪಣೆ
Team Udayavani, Feb 28, 2018, 8:15 AM IST
ರಾಯಚೂರು: ಸಮೀಪದ ಯರಮರಸ್ ಸೂಪರ್ ಕ್ರಿಟಿಕಲ್ ಥರ್ಮಲ್ ಪವರ್ ಸ್ಟೇಶನ್ ಅನ್ನು ಸಿಎಂ ಸಿದ್ದರಾಮಯ್ಯ ಮಂಗಳವಾರ ಅ ಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. 13,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ 800 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಕೇಂದ್ರ ಇದಾಗಿದ್ದು, ಕಡಿಮೆ ಕಲ್ಲಿದ್ದಲಿನಲ್ಲಿ ಹೆಚ್ಚು ವಿದ್ಯುತ್ ಉತ್ಪಾದಿಸಬಹುದು. ಆರ್ಟಿಪಿಎಸ್ 1,720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, ವೈಟಿಪಿಎಸ್ 1600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದೆ. ಎರಡೂ ಕೇಂದ್ರಗಳಿಂದ 3,320 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದಾಗಿದೆ. ಕಳೆದ ವರ್ಷ ಎರಡು ಘಟಕಗಳನ್ನು ವಾಣಿಜ್ಯಿಕ ಉತ್ಪಾದನೆಗೆ ಘೋಷಿಸಲಾಗಿತ್ತು.
ಉದ್ಘಾಟನೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಕರ ಪುಸ್ತಕದಲ್ಲಿ ಶುಭ ಕೋರಿ ಹಸ್ತಾಕ್ಷರ ನೀಡಿದರು.
ವೈಟಿಪಿಎಸ್ ಅನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಕೆಳಗೆ ಮತ್ತು ಮೇಲೆ ಕೆಂಪು ನೆಲಹಾಸು ಹಾಸುವ ಮೂಲಕ ಸಿಎಂಗೆ ಸ್ವಾಗತ ಕೋರಲಾಯಿತು. ಬಳಿಕ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಲಾ ಯಿತು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಆರ್ ಟಿಪಿಎಸ್, ವೈಟಿಪಿಎಸ್ಗೆ ನೀರು ಸಂಗ್ರಹಿಸುವ ಉದ್ದೇಶದಿಂದ ನಿರ್ಮಿಸಿದ ಗುರ್ಜಾಪುರ ಬ್ಯಾರೇಜ್ ಲೋಕಾರ್ಪಣೆ ಮಾಡಿದರು. ಇಂಧನ ಸಚಿವ ಡಿ.ಕೆ. ಶಿವಕುಮಾರ, ಜಿಲ್ಲಾ ಉಸ್ತವಾರಿ ಸಚಿವ ತನ್ವೀರ್ ಸೇs…, ಕೆಪಿಸಿ ವ್ಯವಸ್ಥಾಪಕ
ನಿರ್ದೇಶಕ ಜಿ.ಕುಮಾರ ನಾಯಕ್, ಶಾಸಕ ತಿಪ್ಪರಾಜ್ ಹವಾಲ್ದಾರ್ ಇದ್ದರು. ರಾಯಚೂರು ಸಮೀಪದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ಕೇಂದ್ರವನ್ನು ಸಿಎಂ ಲೋಕಾರ್ಪಣೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ