ಅಘನಾಶಿನಿಯಿಂದ ಬೆಂಗಳೂರಿಗೆ ನೀರು ಹರಿಸಿ: ಟಿಬಿಜೆ


Team Udayavani, Jun 26, 2019, 3:00 AM IST

Udayavani Kannada Newspaper

ತುಮಕೂರು: ಅಘನಾಶಿನಿ ನದಿ ಕೊಳ್ಳದಿಂದ ಹರಿದು ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ನೀರನ್ನು ಒಂದೆಡೆ ಸಂಗ್ರಹಿಸಿ, ಮಧ್ಯ ಕರ್ನಾಟಕ ಪ್ರದೇಶದ ಜಿಲ್ಲೆಗಳಿಗೆ, ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮಘಟ್ಟದಲ್ಲಿ ಹುಟ್ಟಿ ಪಶ್ಚಿಮದ ಕಡೆಗೆ ಹರಿಯುವ ನದಿಗಳಾದ ಅಘನಾಶಿನಿ, ಕಾಳಿ, ಬೇಡ್ತಿ, ನೇತ್ರಾವತಿ, ಶರಾವತಿ ಮತ್ತು ಪೆರಿಯಾರ್‌ ನದಿಗಳ ನೀರನ್ನು ಒಂದೆಡೆ ಸಂಗ್ರಹಿಸಬೇಕು. ಹೆಚ್ಚಿರುವ ನದಿಗಳ ನೀರನ್ನು ಕೊರತೆಯಿರುವ ನದಿಗಳಿಗೆ ಹರಿಸಿದರೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಆಗುವ ಅನಾಹುತ ತಡೆಯಬಹುದು ಎಂದರು.

ಪಶ್ಚಿಮಘಟ್ಟ ನೀರಾವರಿ ಯೋಜನೆಗೆ 10 ರಿಂದ 12 ಸಾವಿರ ಕೋಟಿ ರೂ.ಖರ್ಚಾಗಬಹುದು. ಇದರಿಂದ ಯಾವುದೇ ಪರಿಸರ ಹಾನಿ ಉಂಟಾಗುವುದಿಲ್ಲ. ಈ ನೀರನ್ನು ಬೆಂಗಳೂರು ಮತ್ತು ಮಾರ್ಗ ಮಧ್ಯದಲ್ಲಿ ಬರುವ ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿಗೆ ಬಳಸಿಕೊಳ್ಳಬಹುದಾಗಿದೆ.

1,895 ಚದರ ಕಿ.ಮೀ.ವಿಸ್ತೀರ್ಣ ಹೊಂದಿರುವ ಅಘನಾಶಿನಿ ನದಿಯಲ್ಲಿ ಮಳೆಗಾಲದಲ್ಲಿ ಸರಿ ಸುಮಾರು 100 ರಿಂದ 120 ಟಿಎಂಸಿಯಷ್ಟು ನೀರಿನ ಲಭ್ಯತೆ ಇದೆ. ರಾಜ್ಯ ಸರ್ಕಾರ ಹೇಮಾಗ್ನಿ ನದಿಗೆ ಜಲಾಶಯ ನಿರ್ಮಿಸಿ, 50 ಟಿಎಂಸಿ ನೀರನ್ನು ಉಪಯೋಗಿಸಿ, ವಿದ್ಯುತ್‌ ಉತ್ಪಾದನೆಗೆ ಮುಂದಾಗಿದೆ.

ಇಲ್ಲಿಂದ ಪೈಪ್‌ ಮೂಲಕ ನೀರನ್ನು ಲಿಫ್ಟ್ ಮಾಡಿ ಸಿದ್ದಾಪುರ, ಸಾಗರ ತಾಲೂಕುಗಳ ಮೂಲಕ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮೂಲಕ ಹಟ್ಟಿ ಮೂಡುಗೆರೆ ಗ್ರಾಮದ ವೇದಾವತಿ ಪಾತ್ರಕ್ಕೆ ಹರಿಸಿ, ವಾಣಿವಿಲಾಸ ಸಾಗರಕ್ಕೆ ತರಬಹುದಾಗಿದೆ.

ವೇದಾವತಿ ನದಿಯ ಮಟ್ಟ 750 ಮೀ.ಆಗಿದ್ದು, ಅಲ್ಲಿಂದ 280 ಮೀ.ಗೆ ಲಿಫ್ಟ್ ಮಾಡಬಹುದು. ವಾಣಿವಿಲಾಸದಲ್ಲಿ 28 ರಿಂದ 30 ಟಿಎಂಸಿ ನೀರನ್ನು ಶೇಖರಣೆ ಮಾಡಬಹುದು. ಅಲ್ಲಿಂದ ಚಿಕ್ಕನಾಯಕನಹಳ್ಳಿಯ ಬೋರನಕಣಿವೆ ಜಲಾಶಯಕ್ಕೆ ನೀರನ್ನು ಲಿಫ್ಟ್ ಮಾಡಿದರೆ ಸುಮಾರು 3 ಟಿಎಂಸಿ ನೀರು ಶೇಖರಣೆ ಮಾಡಬಹುದು.

ಅಲ್ಲಿಂದ ಗಾಯತ್ರಿ ಜಲಾಶಯ, ತಿಮ್ಮನಹಳ್ಳಿ, ಗಂಟೇನಹಳ್ಳಿ, ಚೇಳೂರು, ಕೋರಾ, ಕ್ಯಾತ್ಸಂದ್ರ, ದಾಬಸ್‌ಪೇಟೆ ಮೂಲಕ ಅರ್ಕಾವತಿ ನದಿಯ ಹೆಸರುಘಟ್ಟ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರನ್ನು ತರಬಹುದಾಗಿದೆ. ಇದರಿಂದಾಗಿ ಬೆಂಗಳೂರಿಗೆ 50 ರಿಂದ 60 ಟಿಎಂಸಿ ನೀರನ್ನು ತರಬಹುದು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.