ಸ್ವಂತ ಹಣದಲ್ಲೇ ಶಸ್ತ್ರಚಿಕಿತ್ಸೆಗೆ ನೀರು ಸಂಗ್ರಹ
Team Udayavani, May 4, 2019, 3:01 AM IST
ಔರಾದ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ನೂತನ ಆಡಳಿತಾಧಿಕಾರಿಯಾಗಿ ಡಾ| ಗಾಯಿತ್ರಿ ದೇವಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ತಕ್ಷಣವೇ ಸ್ವಂತ ಹಣದಿಂದ ಖಾಸಗಿ ಟ್ಯಾಂಕರ್ ಮೂಲಕ ನೀರು ತರಿಸಿ ಆಸ್ಪತ್ರೆಯಲ್ಲಿ ಸಂಗ್ರಹ ಮಾಡಿಕೊಂಡಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೀರಿಲ್ಲದೆ ನಿಂತು ಹೋದ ಶಸ್ತ್ರ ಚಿಕಿತ್ಸೆಯನ್ನು ಮಂಗಳವಾರದಿಂದಲೇ ಆರಂಭಿಸಲಾಗುತ್ತದೆ ಮತ್ತು ಟ್ಯಾಂಕರ್ ನೀರು ಪೂರೈಸುವಂತೆ ಪಪಂ ಮುಖ್ಯಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಗೆ ಬರುವ ಪ್ರತಿ ರೋಗಿಗೂ ಉತ್ತಮ ಚಿಕಿತ್ಸೆ ನೀಡುವುದೇ ನಮ್ಮ ಧ್ಯೇಯ ಎಂದು ಡಾ| ಗಾಯಿತ್ರಿದೇವಿ ತಿಳಿಸಿದರು.