ಪಾಲಿಕೆಗಳಲ್ಲಿ ಜಲಮಂಡಳಿ ವಿಲೀನ ಕಷ್ಟ
Team Udayavani, Jun 25, 2020, 7:03 AM IST
ಕಲಬುರಗಿ: ಕುಡಿಯುವ ನೀರು ಸರಬರಾಜು ಮತ್ತು ನಿರ್ವಹಣೆ ಬಗ್ಗೆ ಎಲ್ಲ ಕಡೆಗಳಲ್ಲಿ ದೂರುಗಳು ಕೇಳಿಬರುತ್ತಿದೆ. ಅಲ್ಲದೇ ಮಹಾನಗರ ಪಾಲಿಕೆಗಳಲ್ಲಿ ಜಲ ಮಂಡಳಿಗಳನ್ನು ವಿಲೀನ ಮಾಡುವುದು ಕಷ್ಟ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಲಮಂಡಳಿಯವರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಪಾಲಿಕೆ ಆಯುಕ್ತರ ಮಾತು ಕೇಳುತ್ತಿಲ್ಲ ಎನ್ನುವುದು ಸರಿಯಲ್ಲ. ಬೆಂಗಳೂರಿನಲ್ಲೂ ಇಂಥ ಸಮಸ್ಯೆ ಇದೆ. ಪಾಲಿಕೆ ಆಯುಕ್ತರಿಗೆ ಅಧಿಕಾರ ಚಲಾಯಿಸುವ ಹಕ್ಕಿದ್ದು, ಅದನ್ನು ಉಪಯೋಗಿಸಿಕೊಂಡು ನಾಗರಿಕರಿಗೆ ಪರಿಹಾರ ಸೂಚಿಸಬೇಕು ಎಂದರು.
ಪಾಲಿಕೆಗಳ ತೆರಿಗೆ ಹೆಚ್ಚಳದಿಂದ ಜನರಿಗೆ ಕಟ್ಟಲು ತೊಂದರೆಯಾದರೆ ತೆರಿಗೆ ಪಾವತಿ ಅವಧಿ ವಿಸ್ತರಿಸಲಾಗುವುದು. ಆದರೆ ಯಾವುದೇ ಕಾರಣಕ್ಕೂ ತೆರಿಗೆ ಕಡಿಮೆ ಮಾಡಲ್ಲ. ಜನರ ತೆರಿಗೆ ಹಣವನ್ನು ಸರ್ಕಾರ ಸ್ವಂತಕ್ಕೆ ಬಳಸಿಕೊಳ್ಳಲ್ಲ. ಆಯಾ ಜಿಲ್ಲೆಗಳ ಅಭಿವೃದ್ಧಿಗೆ ಉಪಯೋಗಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪತ್ರಕರ್ತರಿಗೆ ನಿವೇಶನ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಶೇ.5ರಷ್ಟನ್ನು ಪತ್ರಕರ್ತರಿಗೆ ಮೀಸಲಿಡಲು ತೀರ್ಮಾ ನಿಸಲಾಗಿದೆ. ಇದಕ್ಕೆ ಸಿಎಂ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್