ರಾಜಕೀಯ ಕಾರ್ಯದರ್ಶಿಗಳ ನೇಮಕಕ್ಕೆ ದಾರಿಸುಗಮ


Team Udayavani, Dec 22, 2018, 6:00 AM IST

28.jpg

ವಿಧಾನಸಭೆ: ದೆಹಲಿಯ ಬಿಸಿಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸಮ್ಮಿಶ್ರ ಸರ್ಕಾರ, ಸಚಿವ ಸ್ಥಾನ ವಂಚಿತ ಶಾಸಕರಿಗೆ ನೀಡಲಾಗುವ ರಾಜಕೀಯ ಕಾರ್ಯದರ್ಶಿ ಸ್ಥಾನವನ್ನು ಲಾಭದಾಯಕ ಹುದ್ದೆಯಿಂದ ಹೊರಗಿಡಲು ನಿರ್ಧರಿಸಿದೆ.ಈ ಸಂಬಂಧ 2018ನೇ ಸಾಲಿನ ಕರ್ನಾಟಕ ವಿಧಾನಮಂಡಲದ (ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕಕ್ಕೆ ಎರಡೂ ಸದನಗಳಲ್ಲಿ ಅಂಗೀಕಾರ ನೀಡಲಾಯಿತು.

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಲು ಅವಕಾಶ ಒದಗಿಸಲು 2018ನೇ ಸಾಲಿನ ಕರ್ನಾಟಕ ವಿಧಾನಮಂಡಲದ (ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕಕ್ಕೂ ಎರಡೂ ಸದನಗಳಲ್ಲಿ ಅಂಗೀಕಾರ ನೀಡಲಾಯಿತು. ಶಾಸಕರು ರಾಜಕೀಯ ಕಾರ್ಯದರ್ಶಿ ಹುದ್ದೆ ಹೊಂದಿದರೆ, ಲಾಭದಾಯಕ ಹುದ್ದೆ ಎಂದು ಪರಿಗಣಿಸುವುದರಿಂದ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವಂತಿತ್ತು. ಈ ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಲಾಭದಾಯಕ ಹುದ್ದೆ ವ್ಯಾಪ್ತಿಯಿಂದ ಹೊರಗಿಡಲು ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ದೆಹಲಿ ಸೇರಿ ಕೆಲವು ರಾಜ್ಯಗಳಲ್ಲಿ ರಾಜಕೀಯ ಕಾರ್ಯದರ್ಶಿ ನೇಮಕ ಸಂಬಂಧ ಅದು ಲಾಭದಾಯಕ ಹುದ್ದೆ ಎಂದು ಪರಿಗಣಿತವಾಗಿ ವಿವಾದ ಉಂಟಾಗಿದ್ದರಿಂದ  ದೆಹಲಿ ಪ್ರಕರಣದಲ್ಲಿ ರಾಜಕೀಯ ಕಾರ್ಯದರ್ಶಿಗಳಾಗಿದ್ದ ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು. ಈ ಹಿನ್ನೆಲೆಯಲ್ಲಿ  ಮುಂಜಾಗರೂಕತಾ ಕ್ರಮವಾಗಿ ಈ ವಿಧೇಯಕ ತಂದು ಸರ್ಕಾರ ತನ್ನ ಹಾದಿ ಸುಗಮಗೊಳಿಸಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅವರು ಬಿಜೆಪಿಯವರ ಘೋಷಣೆಗಳ ನಡುವೆಯೇ ವಿಧೇಯಕದ ಪರ್ಯಾಲೋಚನೆ ಮಾಡಿದರು. ನಂತರ ಸಭಾಧ್ಯಕ್ಷ ರಮೇಶ್‌ ಕುಮಾರ್‌ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ ಎಂದು ಘೋಷಿಸಿದರು.

ಇದಲ್ಲದೇ, ಕರ್ನಾಟಕ ಸಿವಿಲ್‌ ಸೇವೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ನೇಮಕಾತಿಯಲ್ಲಿ ಅರ್ಹತೆ ಆಧಾರದಲ್ಲಿ ಸಾಮಾನ್ಯ ವರ್ಗದಡಿಯಲ್ಲಿಯೂ ಅವಕಾಶ ಕಲ್ಪಿಸಲು ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯಧಾನ) ವಿಧೇಯಕ 2018 ವಿಧೇಯಕವನ್ನು ಎರಡೂ ಸದನಗಳಲ್ಲಿ ಯಾವುದೇ ಚರ್ಚೆಯಿಲ್ಲದೇ ಅಂಗೀಕರಿಸಲಾಯಿತು.

1995ರ ಸಿವಿಲ್‌ ನೇಮಕಾತಿಯಲ್ಲಿರುವ ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸ್ಪರ್ಧಾತ್ಮಕವಾಗಿ ಅರ್ಹತೆ ಹೊಂದಿದ್ದರೂ ಸಾಮಾನ್ಯ ವರ್ಗದ ಅಡಿಯಲ್ಲಿ ಹುದ್ದೆ ಪಡೆಯಲು ಅವಕಾಶ ವಂಚಿತರಾಗುತ್ತಿದ್ದರು. ಸಿವಿಲ್‌ ಸೇವೆಗಳ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೂ ಸಾಮಾನ್ಯ ವರ್ಗದ ಹುದ್ದೆಗಳಿಗೆ ಅವಕಾಶ ಕಲ್ಪಿಸಿ 1995ರಿಂದಲೇ ಅನ್ವಯವಾಗುವಂತೆ ಕಾನೂನಿಗೆ ತಿದ್ದುಪಡಿ ತರಲಾಗಿದೆ.

ವಿವಿ ತಿದ್ದುಪಡಿ ಕಾಯ್ದೆಗೆ ಅಂಗೀಕಾರ
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಮೂವರು ಸಿಂಡಿಕೇಟ್‌ ಸದಸ್ಯರನ್ನು ನಾಮ ನಿರ್ದೇಶನ ಮಾಡಲು
ಅವಕಾಶ ಕಲ್ಪಿಸುವ 2018ನೇ ಸಾಲಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕಕ್ಕೆ
ಅಂಗೀಕಾರ ನೀಡಲಾಯಿತು.

ಟಾಪ್ ನ್ಯೂಸ್

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.