ಆಪರೇಶನ್ ಕಮಲ ಮಾಡುತ್ತಿಲ್ಲ: ಬಿವೈಆರ್
Team Udayavani, Jan 19, 2019, 1:20 AM IST
ಬೈಂದೂರು: ಶನಿವಾರ ಸಂಜೆಯೊಳಗೆ ಬಿಜೆಪಿ ಶಾಸಕರೆಲ್ಲರೂ ತಮ್ಮ ಕ್ಷೇತ್ರಗಳಿಗೆ ವಾಪಸ್ಸಾಗುತ್ತಾರೆ. ನಾವೇನು ಆಪರೇಶನ್ ಕಮಲ ಮಾಡುತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿ, ನಾವೇನು ಆಪರೇಶನ್ ಕಮಲ ಮಾಡುತ್ತಿಲ್ಲ. ಅವರದೇ ಪಕ್ಷದ ಶಾಸಕರು ತಮ್ಮನ್ನು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಬೇಸತ್ತು ಅವರಾಗಿಯೇ ಹೊರಗಡೆ ಬಂದಿದ್ದರು ಎಂದರು.
ನಮಗಿಂತ ಕಡಿಮೆ ಸ್ಥಾನ ಪಡೆದರೂ ಸರಕಾರ ರಚಿಸಿದ ಜೆಡಿಎಸ್ ಹಾಗೂ ಕಾಂಗ್ರೆಸ್ಗಳೆರಡಕ್ಕೂ ಬಿಜೆಪಿಯನ್ನುಪ್ರಶ್ನಿಸುವ ನೈತಿಕತೆಯಿಲ್ಲ. ಆರು ತಿಂಗಳಿಂದ ಸರಕಾರ ಇದೆಯೋ? ಇಲ್ಲವೋ? ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಸಾಲ ಮನ್ನಾ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆಯೇ ಹೊರತು ಈವರೆಗೂ ರೈತರಿಗೆ ಅನುಕೂಲವಾಗಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?