ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ: ಯಡಿಯೂರಪ್ಪ
ಚಡ್ಡಿ ಸುಡುವ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಸಿಎಂ
Team Udayavani, Jun 6, 2022, 4:28 PM IST
ಬೆಂಗಳೂರು: ರಾಜಸಭೆಯಲ್ಲಿ ಮೂರು ಸ್ಥಾನ ನಾವು ಗೆದ್ದೇ ಗೆಲ್ಲುತ್ತೇವೆ. ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.
ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಆ ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ. ಕಾಂಗ್ರೆಸ್ ನವರು ಹೇಳುವುದು, ಬೇರೆಯವರು ಹೇಳುವುದಕ್ಕೆ ಟೀಕೆ ಮಾಡಲು ಹೋಗುವುದಿಲ್ಲ. ಮೂರಕ್ಕೆ ಮೂರು ಸ್ಥಾನ ಗೆಲ್ಲುವುದು ಶತಸಿದ್ಧ. ಅದರಲ್ಲಿ ಯಾವುದೇ ಅನುಮಾನ ಯಾರಿಗೂ ಇಲ್ಲ ಎಂದರು.
ಲೆಹರ್ ಸಿಂಗ್ ಗೆ ದ್ವಿತೀಯ ಪ್ರಾಶಸ್ತ್ಯದ ಪೂರ್ಣ ಮತ, ಮೊದಲ ಪ್ರಾಶಸ್ತ್ಯದ ಹೆಚ್ಚುವರಿ ಮತ ಕೊಡಿಸಿದರೆ ಅದೇ ಸಾಕು ನಮಗೆ, ಬೇರೆ ಯಾವುದೇ ಮತ ಅಗತ್ಯವಿಲ್ಲ ಎಂದರು.
ಆತ್ಮ ಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು. ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಲ್ಲಿ ಬಿಜೆಪಿಗೆ ಸಮಸ್ಯೆಯಾಗುವ ವಿಚಾರಕ್ಕೆ , ಅನಗತ್ಯವಾಗಿ ನಾನ್ಯಾಕೆ ಅದರ ಬಗ್ಗೆ ಮಾತಾಡಲಿ ಎಂದ ಅವರು ಆರ್ ಎಸ್ ಎಸ್ ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ