ನಾವು ಪಾಂಡವರು, ಬಿಜೆಪಿಯವರು ಕೌರವರು: ಸಿಎಂ


Team Udayavani, Jan 17, 2018, 10:38 AM IST

17-16.jpg

ಬೆಂಗಳೂರು: ಚುನಾವಣೆ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ನವರು ಪಾಂಡವರು, ಬಿಜೆಪಿಯವರು ಕೌರವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ. ಮಂಗಳವಾರ ಕೆಪಿಸಿಸಿ ನೂತನ ಪದಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ತಲೆ ತಗ್ಗಿಸುವಂತಹ ಯಾವುದೇ ಕೆಲಸ ಮಾಡಿಲ್ಲ. ಸುಳ್ಳು ಹೇಳ್ಳೋದು ಬೇಡ, ಸತ್ಯವನ್ನೇ ಬಲವಾಗಿ ಹೇಳ್ಳೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದಾಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಮಾತನಾಡಿದರು.

ಬಿಜೆಪಿಯವರ ಹಿಂದುತ್ವವನ್ನು ತೀವ್ರವಾಗಿ ವಿರೋಧಿಸಬೇಕು. ಅವರೊಬ್ಬರೇ ಹಿಂದೂ ರಕ್ಷಕರಾ? ಅವರು ಅಧಿಕಾರಕ್ಕೆ ಬಂದದ್ದು ಈಗ. 70 ವರ್ಷಗಳಿಂದ ಹಿಂದೂ ಧರ್ಮದ ರಕ್ಷಣೆ ಮಾಡಿದ್ದು ಯಾರು? ಎಲ್ಲ ಧರ್ಮಗಳನ್ನು ಕಾಂಗ್ರೆಸ್‌ ರಕ್ಷಣೆ ಮಾಡಿದೆ. ಬಿಜೆಪಿಯವರಿಗೆ ಹಿಂದುತ್ವ ಬಿಟ್ಟು ಹೇಳಲು ಬೇರೇನೂ ಉಳಿದಿಲ್ಲ. ಪ್ರಧಾನಿ ಮೋದಿಗೆ ಬೆಂಕಿ ಹಚ್ಚೋದು ಬಿಟ್ಟು ಬೇರೆ ಏನೂ ಬರುವುದಿಲ್ಲ ಎಂದು ವಾಗ್ಧಾಳಿ ನಡೆಸಿದರು.  ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ನನ್ನ ವಿರುದ್ಧ ನೇರವಾಗಿ ಆರೋಪ ಮಾಡಿದರೂ, ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಖಂಡಿಸಲಿಲ್ಲ. ಪಕ್ಷದ ನಾಯಕರ ಗಮನಕ್ಕೆ ಬರದೇ ಅನಂತಕುಮಾರ್‌ ಹೆಗಡೆ ಮಾತನಾಡಲು ಸಾಧ್ಯವಿಲ್ಲ. ಬಿಜೆಪಿಯವರ ಈ ರೀತಿಯ ಹೇಳಿಕೆಯನ್ನು ನೇರವಾಗಿ ಖಂಡಿಸಬೇಕೆಂದು ಮುಖ್ಯಮಂತ್ರಿ ತಿಳಿಸಿದರು.
 
ರಾಜ್ಯ ಬಿಜೆಪಿಯವರು ಯಡಿಯೂರಪ್ಪ ಅವರನ್ನು ನಂಬಿಕೊಂಡಿಲ್ಲ. ಮೋದಿಯನ್ನು ನಂಬಿಕೊಂಡಿದ್ದಾರೆ. ಯಡಿಯೂರಪ್ಪ ಅದು ಬಿಡ್ತೀನಿ ಇದು ಬಿಡ್ತೀನಿ ಅಂತ ಹೆದರಿಸುತ್ತಾರೆ. ಅವರದು ಖಾಲಿ ಬುಟ್ಟಿ. ಬಿಜೆಪಿಯವರ ಮಿಷನ್‌ 150ರ ಬಗ್ಗೆ ಅವರ ಶಾಸಕರಿಗೇ ನಂಬಿಕೆ ಇಲ್ಲ. ನಮಗೆ ಬೂತ್‌ ಕಮಿಟಿ ಅತ್ಯಂತ ಮುಖ್ಯವಾಗಿದೆ. ಪ್ರತಿ ಬೂತ್‌ನಲ್ಲಿ 50 ವೋಟು ಹೆಚ್ಚಾದರೆ, 10 ಸಾವಿರ ಮತಗಳು ಹೆಚ್ಚಾಗುತ್ತವೆ. ಬೂತ್‌ ಕಮಿಟಿ ಸದಸ್ಯರಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕೆಂದು ಸೂಚಿಸಿದರು. ಬೂತ್‌ ಕಮಿಟಿ ಮೂಲಕ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸರ್ಕಾರ ಅಕ್ಕಿ ಕೊಟ್ಟಿದೆ. ಸಾಲ ಮನ್ನಾ ಮಾಡಿದೆ. ಆದರೆ, ಜನರು ಸೊಸೈಟಿಯವರು ಮಾಡಿದ್ದಾರೆಂದು ಹೇಳುತ್ತಾರೆ. ಬೂತ್‌ ಕಮಿಟಿ ಸದಸ್ಯರು ಜನರಿಗೆ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು ಎಂದರು. ಪ್ರತಿಯೊಂದು ಬೂತ್‌ ಕಮಿಟಿಯವರು ಮತದಾರರ ಪಟ್ಟಿ ಇಟ್ಟುಕೊಂಡಿರಬೇಕು. ಅನಗತ್ಯವಾಗಿ ಹೊರಗಿನವರ ಹೆಸರು ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ಇಲ್ಲದಿರುವುದರಿಂದ ಬಿಜೆಪಿಯವರು ಆರ್‌ ಎಸ್‌ಎಸ್‌ನವರನ್ನು ಕರೆದುಕೊಂಡು ಬಿಡುತ್ತಾರೆ. ಅವರ ಬಗ್ಗೆ ನಿಗಾ ಇಡಬೇಕೆಂದು ಸಿಎಂ ಕಿವಿ ಮಾತು ಹೇಳಿದರು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಕಾಂಗ್ರೆಸ್‌ ಪರವಾದ ವಾತಾವರಣವಿದೆ. ಬೋಗಸ್‌ ಕಂಪನಿಗಳು ಸಮೀಕ್ಷೆ ಮಾಡುವುದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಕುಮಾರಸ್ವಾಮಿ, ಯಡಿಯೂರಪ್ಪ ಎಷ್ಟೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು. 

ಇಬ್ರಾಹಿಂ-ಗೌಡರ ಭೇಟಿಗೆ ಆಕ್ಷೇಪ
ಬೆಂಗಳೂರು:
ವಿಧಾನ ಪರಿಷತ್‌ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದು ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಪ್ರತಿಧ್ವನಿಸಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿಯಾವುಲ್ಲಾ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಒಬ್ಬ ಜವಾಬ್ದಾರಿ ಇರುವ ಪಕ್ಷದ ನಾಯಕರು ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ರೀತಿಯ ಭೇಟಿಯಿಂದ ಸಮಾಜಕ್ಕೆ ಪಕ್ಷದಿಂದ ಯಾವ ರೀತಿಯ ಸಂದೇಶ ಹೋಗುತ್ತದೆ ಎಂದು
ಇಬ್ರಾಹಿಂ ಭೇಟಿ ಬಗ್ಗೆ ಕಿಡಿಕಾರಿದರು. ಆದರೆ, ಜಿಯಾವುಲ್ಲಾ ಅವರ ಆಕ್ಷೇಪಕ್ಕೆ ಯಾವ ನಾಯಕರೂ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದರು.

ಟಾಪ್ ನ್ಯೂಸ್

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.