ಖರ್ಗೆ ಮುಖ್ಯಮಂತ್ರಿಯಾಗಬೇಕಾಗಿತ್ತು: ಮುನಿಯಪ್ಪ


Team Udayavani, Jan 28, 2019, 12:56 AM IST

5.jpg

ಬೆಂಗಳೂರು: ‘ನೀವೆಲ್ಲಾ ಮುನಿಯಪ್ಪನವರು ಪ್ರಧಾನಿ ಯಾಗಬೇಕು, ರಾಜ್ಯಪಾಲರಾಗಬೇಕು ಎಂದೆಲ್ಲಾ ಹೇಳುತ್ತೀರಿ. ಆದರೆ, ಈ ದೇಶದ ದಲಿತರ ಉಸಿರಾಗಿದ್ದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರು ದಕ್ಷತೆ ಇದ್ದರೂ, ಪ್ರಧಾನಿಯನ್ನಾಗಿ ಮಾಡಲಿಲ್ಲ. ಚಿನ್ನದಂತ ಅವಕಾಶವಿದ್ದರೂ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ. ಹೀಗಿರುವಾಗ ನಾನು ಆಗಲು ಸಾಧ್ಯವೇ’ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ನಡೆದ ‘ಜಾಂಬವನ ಕಥೆ-ವ್ಯಥೆ’ ಕಾರ್ಯ ಕ್ರಮದಲ್ಲಿ ತಿಂಗಳ ಅತಿಥಿಯಾಗಿ ಮಾತನಾಡಿದರು.

ಜಾಂಬವ ಸಮಾಜದ ಹಲವು ಮುಖಂಡರು ಮುನಿಯಪ್ಪ ಅವರಿಗೆ ಈ ದೇಶದ ಪ್ರಧಾನಿ ಆಗುವ ಅರ್ಹತೆಗಳಿವೆ ಎಂಬ ಮಾತಿಗೆ ಉತ್ತರಿಸಿದ ಮುನಿಯಪ್ಪ, ‘ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ 79 ಸ್ಥಾನಗಳಲ್ಲಿ ಜಯಿಸಿತ್ತು. ಆಗ ಖರ್ಗೆ ಅವರನ್ನು ಈ ನಾಡಿನ ಮುಖ್ಯಮಂತ್ರಿಯನ್ನಾಗಿ ಮಾಡುವ ಎಲ್ಲ ಅವಕಾಶವಿತ್ತು. ಆದರೆ, ದಲಿತ ವ್ಯಕ್ತಿಯನ್ನು ಮುಖ್ಯ ಮಂತ್ರಿಯನ್ನಾಗಿ ಮಾಡುವ ಆ ಚಿನ್ನದಂಥ ಅವಕಾಶವನ್ನು ಕೈ ಚೆಲ್ಲಲಾಯಿತು. ಸೋಲಿಲ್ಲದ ಸರದಾರರೆನಿಸಿ ಕೊಂಡಿರುವ ಖರ್ಗೆ ಅವರು ಈ ನಾಡಿನ ಮುಖ್ಯ ಮಂತ್ರಿಯಾಗಬೇಕಾಗಿತ್ತು’ ಎಂದು ಹೇಳಿದರು.

ಹೋರಾಟಗಾರರ ಕುಟುಂಬ: ‘ನಮ್ಮದು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ. ತಂದೆ ಸ್ವಾತಂತ್ರ್ಯ ಹೋರಾಟ ಗಾರರಾಗಿದ್ದರು. ಇದು ಒಂದು ರೀತಿಯಲ್ಲಿ ರಾಜಕೀಯ ಬರಲು ಕಾರಣವಾಯಿತು. ಮುನಿಯಪ್ಪ ನವರು ಹೆಚ್ಚು ವಿದ್ಯಾಭ್ಯಾಸ ಪಡೆದಿದ್ದು, ಅವರಿಗೆ ಸಂಸದರಾಗಿ ಸ್ಪರ್ಧಿ ಸಲು ಅವಕಾಶ ನೀಡಬೇಕೆಂದು ಬಲಗೈ ಸಮುದಾಯದ ಹಲವರು ಅಂದಿನ ಕಾಂಗ್ರೆಸ್‌ ಅಧ್ಯಕ್ಷೆ ಇಂದಿರಾಗಾಂಧಿ ಅವರಿಗೆ ಪತ್ರ ಬರೆದಿದ್ದರು. ಕಾಂಗ್ರೆಸ್‌ನ ಹಿರಿಯ ಮುಖಂಡ ರಾಚಯ್ಯ, ಬಸವ ಲಿಂಗಪ್ಪ, ಸೂರೇ ಗೌಡ್ರು, ಮುನಿಯಪ್ಪ, ಈಗಿನ ಸ್ಪೀಕರ್‌ ರಮೇಶ್‌ ಕುಮಾರ್‌ ಸೇರಿ ಎಲ್ಲರೂ ರಾಜಕೀಯವಾಗಿ ಬೆಳೆಯಲು ಸಹಕಾರ ನೀಡಿದ್ದಾರೆ’ ಎಂದರು.

ನಂಬರ್‌ ಒನ್‌ ಕೃಷಿಕನಾಗಿದ್ದೆ: ‘ನಾನು ಪ್ರೌಢಶಿಕ್ಷಣ ಮುಗಿಸಿದ ಮೇಲೆ ಹಲವು ವರ್ಷಗಳ ಕಾಲ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದೆ. ರಾಜ್ಯದ ನಂಬರ್‌ ಒನ್‌ ಕೃಷಿಕ ಮತ್ತು ರೇಷ್ಮೆ ಬೆಳಗಾರ ಎಂಬೆಲ್ಲಾ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೆ. ಇದಾದ ಬಳಿಕ ಮತ್ತೆ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದೆ. ಬಿಎ ಪದವಿ ಪಡೆದ ನಂತರ ವಕೀಲನಾದೆ. ಬಳಿಕ ರಾಜಕೀಯ ಪ್ರವೇಶಿಸಿದೆ. ನನ್ನನ್ನು ಕೇವಲ ಒಂದು ಸಮಾಜ ಕೈ ಹಿಡಿದಿಲ್ಲ, ಎಲ್ಲಾ ಸಮಾಜದವರು ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ’ ಎಂದು ಹೇಳಿದರು.

ಹೆಡ್‌ ಕಾನ್‌ಸ್ಟೇಬಲ್‌ ಮಗಳೊಂದಿಗೆ ಮದುವೆ: ‘ನಮ್ಮ ಮನೆಯವರು ಕೋಲಾರ ಮೂಲದ ಹೆಡ್‌ ಕಾನ್‌ಸ್ಟೇಬಲ್‌ರೊಬ್ಬರ ಮಗಳನ್ನು ನೋಡಿ ಮದುವೆ ಮಾಡಿದರು. ನನ್ನ ಪತ್ನಿ ನಾಗರತ್ನಮ್ಮ ಅವರು ಕೂಡ ಎಸ್ಸೆಸ್ಸೆಲ್ಸಿ ಓದಿದ್ದಾರೆ. ಅವರು ನನ್ನೆಲ್ಲಾ ಕಷ್ಟ ಸುಖಗಳಲ್ಲಿ ಭಾಗಿಗಳಾಗಿದ್ದಾರೆ. ಐವರು ಮಕ್ಕಳೂ ಉನ್ನತ ವ್ಯಾಸಂಗ ಮಾಡಿದ್ದಾರೆ. ನನ್ನ ರಾಜಕೀಯ ಏಳ್ಗೆಯಲ್ಲಿ ಪತ್ನಿಯ ಪಾಲು ದೊಡ್ಡದಿದೆ’ ಎಂದರು.

ಹೊಗಳಿಕೆಯನ್ನು ಮೊದಲು ಬಿಡಿ!

ಕೆ.ಎಚ್. ಮುನಿಯಪ್ಪ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು, ರಾಜ್ಯಪಾಲರನ್ನಾಗಿ ಮಾಡಬೇಕೆಂಬ ಒತ್ತಾಯಗಳಿಗೆ ಖಾರವಾಗಿಯೇ ಪ್ರತಿಕ್ರಿಯಿಸಿದ ಹಿರಿಯೂರಿನ ಜಾಂಬವ ಸಮುದಾಯ ಸಂಸ್ಥಾನದ ಷಡಕ್ಷರಿ ಮುನಿ ಸ್ವಾಮಿ, ಪ್ರಧಾನಿ ಪದವಿ ಎಂದರೆ ಏನೆಂದು ಕೊಂಡಿದ್ದೀರಿ. ಅದನ್ನು ಯಾರೋ ಕೊಡುವುದು ಎಂದು ತಿಳಿದಿದ್ದೀರಾ? ಮೊದಲು, ಜಾಂಬವ ಸಮಾಜದವರು ಸುಶಿಕ್ಷಿತರಾಗಿ, ಹೊಗಳಿಕೆ ಮತ್ತು ಒಳಜಗಳ ಬಿಟ್ಟು ಒಗ್ಗಟ್ಟಾಗಿ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ನಾನು ನಿಮ್ಮ ಜತೆ ಇರುತ್ತೇನೆ ಎಂದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.