ಸಾರಿಗೆ ನೌಕರರ 3 ಬೇಡಿಕೆ ಈಡೇರಿಸಿದ್ದೇವೆ; ಇನ್ಮುಂದೆ ಸಂಬಳ ಕಡಿತ ಮಾಡುವುದಿಲ್ಲ:ಸವದಿ ಭರವಸೆ
Team Udayavani, Feb 2, 2021, 4:14 PM IST
ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಮೂಲಕ ನಾಲ್ಕೈದು ಸಭೆಗಳನ್ನು ನಡೆಸಲಾಗಿದೆ. ಈ ಹಿಂದೆ ಹತ್ತು ಬೇಡಿಕೆಗಳನ್ನು ಇಟ್ಟಿದ್ದರು. ಅದರಲ್ಲಿ ಒಂಬತ್ತಕ್ಕೆ ಒಪ್ಪಿಗೆ ಕೊಟ್ಟಿದ್ದೇವೆ. ಈಗಾಗಲೇ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ ಎಂದು ವಿಧಾನಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.
ನೌಕರರ ತರಬೇತಿ ಅವಧಿ ಎರಡು ವರ್ಷದ ಬದಲಿಗೆ ಒಂದು ವರ್ಷಕ್ಕೆ ಇಳಿಸಲಾಗಿದೆ. ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ಸಮಿತಿ ವರದಿ ಕೊಟ್ಟಿದೆ. ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚನೆ ಕೊಟ್ಟಿದ್ದೇನೆ. ನಾಳೆ ಮತ್ತೆ ಸಭೆ ನಡೆಸಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು. ಯಾರೂ ಇದನ್ನ ತಪ್ಪು ದಾರಿಗೆ ಎಳೆಯಬಾರದು. ಅಂತಹ ಕೆಲಸ ನಡೆದರೆ ನೌಕರರು ಗಮನ ಕೊಡಬಾರದು ಎಂದರು.
ಒಂದೂವರೆ ತಿಂಗಳ ಸಂಬಳ ನೀಡದ ವಿಚಾರವಾಗಿ ಮಾತನಾಡಿದ ಅವರು, ನೌಕರರಿಗೆ ನಮ್ಮ ಮೇಲೆ ನಂಬಿಕೆ ಇದೆ. ಅವರ ಮೇಲೆ ನಮಗೆ ಭರವಸೆ ಇದೆ. ಹೀಗಿರುವಾಗ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು. ನಾವೆಲ್ಲಾ ಒಂದು ಕುಟಂಬದಂತೆ ಇದ್ದೇವೆ. ಅಪರಾಧ ಮಾಡಿರುವವರು ಅಮಾನತು ಆಗಿದ್ದಾರೆ. ಅವರನ್ನ ವಾಪಸ್ ತೆಗೆದುಕೊಳ್ಳುವಂತೆ ನೌಕರರು ನಮ್ಮ ಮುಂದೆ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಅದರ ಬಗ್ಗೆ ಈಗ ಚರ್ಚೆ ಅನಗತ್ಯ.
ಇದನ್ನೂ ಓದಿ: ಮಂಗಳೂರು: ಎಸಿಬಿ ದಾಳಿ ಅಂತ್ಯ; ಕೋಟ್ಯಾಂತರ ರೂಪಾಯಿ ಆಸ್ತಿ ಪತ್ತೆ ?
ಈಗ ಹಣಕಾಸು ಇಲಾಖೆಯಿಂದ ಹಣ ಬಂದಿಲ್ಲ. ಹೀಗಾಗಿ ಡಿಸೆಂಬರ್ ತಿಂಗಳ ಅರ್ಧ ಸಂಬಳ ಮಾತ್ರ ಕೊಟ್ಟಿದ್ದೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಹಣಕಾಸು ಇಲಾಖೆಯಿಂದ ಹಣ ಬರಲಿದೆ. ನಂತರದಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳುವುದಿಲ್ಲ. ಸಂಬಳ ಕಡಿತವನ್ನೂ ಮಾಡುವುದಿಲ್ಲ.ಕುಟುಂಬ ನಿರ್ವಹಣೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಅರ್ಧ ಸಂಬಳವನ್ನು ಈಗಾಗಲೇ ಕೊಟ್ಟಿದ್ದೇವೆ. ಇನ್ನೆರಡ್ಮೂರು ದಿನಗಳಲ್ಲಿ ಎಲ್ಲಾ ಬಾಕಿಯನ್ನ ಕೊಡುತ್ತೇವೆ ಎಂದರು.
ನೌಕರರ ವಿರುದ್ಧ ದಾಖಲಾಗಿರುವ ಎಫ್ಐಆರ್ ದಾಖಲು ವಾಪಸ್ ವಿಚಾರವಾಗಿ ಮಾತನಾಡಿ, ಇಲಾಖಾಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಎಫ್ ಐಆರ್ ದಾಖಲಾಗಿದೆ ಎಂಬುದನ್ನ ತಿಳಿದುಕೊಳ್ಳುತ್ತೇವೆ. ಆ ಬಳಿಕ ಏನು ಮಾಡಬೇಕು ಎಂಬುದನ್ನ ತೀರ್ಮಾನ ಮಾಡುತ್ತೇವೆ.
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ. ಕಳೆದ 2013-14ರಿಂದ ಟ್ಯಾಕ್ಸಿಗಳಿಗೆ ದರ ಹೆಚ್ಚಳ ಮಾಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಗದಗ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು