ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ..: ಸಿಎಂ ಬೊಮ್ಮಾಯಿ
Team Udayavani, Aug 1, 2022, 11:16 AM IST
ಬೆಂಗಳೂರು: ಸಿದ್ದರಾಮೋತ್ಸವದಿಂದ ಬಿಜೆಪಿಗೆ ಯಾವುದೇ ರೀತಿಯಿಂದಲೂ ಆಪತ್ತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆಯಾಗಲಿ, ಸಿದ್ದರಾಮೋತ್ಸವದಿಂದಾಗಲಿ ನಮಗೆ ಅಂಜಿಕೆ ಇಲ್ಲ. ನಾವು ನಿತ್ಯ ಸಿದ್ದರಾಮ ದೇವರ ಉತ್ಸವ ಮಾಡುವವರು ಎಂದು ವ್ಯಂಗ್ಯವಾಡಿದರು.
ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದೇವೆ. ಆದರೆ ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಬೇರೆ ರೀತಿ ಆಚರಣೆ ಮಾಡುತ್ತೇವೆ. ಈ ಬಗ್ಗೆ ಪಕ್ಷ ಹಾಗೂ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆ ಬಳಿಕ ಅಧಿಕೃತವಾಗಿ ಪ್ರಕಟಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಕೊಲೆಯಾದ ಫಾಝಿಲ್ – ಮಸೂದ್ ಮನೆಗಳಿಗೂ ಭೇಟಿ ಕೊಡುತ್ತೇನೆ: ಸಿಎಂ ಬೊಮ್ಮಾಯಿ
ಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಮಾಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಚರ್ಚೆ ಮಾಡಿಯೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.
ಬಿಜೆಪಿ ಮೂಲಗಳ ಪ್ರಕಾರ ಆಗಸ್ಟ್ 15 ರಿಂದ 30 ರ ವರೆಗೆ ರಾಜ್ಯಾದ್ಯಂತ ಜನೋತ್ಸವ ಕಾರ್ಯಕ್ರಮ ನಡೆಸುವುದಕ್ಕೆ ವರಿಷ್ಠರೇ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ