ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು: ಬಿಎಸ್ ವೈ ವಿರುದ್ಧ ಮತ್ತೆ ಯತ್ನಾಳ್ ಆಕ್ರೋಶ
Team Udayavani, Jan 20, 2021, 2:53 PM IST
ಬೆಂಗಳೂರು: ಪ್ರಧಾನಿ ಮೋದಿ ಆಶಯದಂತೆ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು. ಈ ಕುರಿತು ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆಯುತ್ತೇನೆ. ಒಂದೇ ಮನೆಯಲ್ಲಿ ಇಬ್ಬರು- ಮೂವರು ಶಾಸಕರು, ಸಂಸದರು ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರು ಸಚಿವ ಸ್ಥಾನ ಬಿಟ್ಟುಕೊಡಬೇಕು. ಪಕ್ಷದ ಸಂಘಟನೆಯ ಕಡೆ ಮುಖ ಮಾಡಬೇಕು. ಹಿರಿಯ ಸಚಿವರು ಹಳ್ಳಿ ಕಡೆಗೆ ನಮ್ಮ ನಡಿಗೆ ಅಂತ ಪಕ್ಷ ಸಂಘಟನೆ ಮಾಡಲು ಹೊರಡಲಿ. ಕ್ರಿಯಾಶೀಲರಾಗಿ ಕೆಲಸ.ಮಾಡುವ ಯುವಕರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಿಕೊಡಲಿ ಎಂದರು.
ಇದನ್ನೂ ಓದಿ:ಕುರುಬ ಸಮಾಜ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ: ಸಿದ್ದರಾಮಯ್ಯಗೆ ವಿಶ್ವನಾಥ್ ಎಚ್ಚರಿಕೆ
ದಿನಾ ಬೆಳಗ್ಗೆ ಎದ್ದರೆ ಮಾಧ್ಯಮಗಳಲ್ಲಿ ರಾಜಾ ರಾಜಾ ಹುಲಿ ಹುಲಿ ಎನ್ನುತ್ತಾರೆ. ರಾಜಾಹುಲಿಗೆ ಧಕ್ಕೆಯಾದರೆ ಪಕ್ಷ ನಾಶ ಅಂದರೆ ಏನು ಮಾಡೋದು ಎಂದು ಬಿಎಸ್ ವೈ ರನ್ನು ಟೀಕಿಸಿದರು.
ಇದನ್ನೂ ಓದಿ: ಗುಡಿಬಂಡೆ ವರ್ಲಕೊಂಡ ಬೆಟ್ಟಕ್ಕೆ ಗಣಿಆಪತ್ತು? ಅಧಿಕಾರಿಗಳು ಮೌನ: ಸ್ಥಳೀಯರಿಗೆ ಆತಂಕ
ರೇಣುಕಾಚಾರ್ಯ ಯಾರ ವಿರುದ್ಧ ದೂರು ಕೊಡಕು ದಿಲ್ಲಿಗೆ ಹೋಗಿದ್ದಾರೆ ಗೊತ್ತಿಲ್ಲ. ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಸಿಎಂಗೆ ಇದೆ. ರೇಣುಕಾಚಾರ್ಯ ದೆಹಲಿಗೆ ಹೋಗಿ ಯಾರ ವಿರುದ್ಧ ದೂರು ಕೊಟ್ಟಿದ್ದಾರೆ ತಿಳಿದಿಲ್ಲ. ನಮ್ಮ ಅಸಮಾಧಾನ ತಣ್ಣಗಾಗಿಲ್ಲ. ಯಾರೂ ನಮ್ಮ ಜೊತೆ ಮಾತನಾಡಿಲ್ಲ. ಅಧ್ಯಕ್ಷರ ಜೊತೆ ಸಂದರ್ಭ ಬಂದಾಗ ಮಾತನಾಡುತ್ತೇನೆ ಎಂದು ಯತ್ನಾಳ್ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ