ಪಶ್ಚಿಮವಾಹಿನಿ: 16 ಕಾಮಗಾರಿಗಳು ಪೂರ್ಣ: ಸಚಿವ ಜೆ.ಸಿ. ಮಾಧುಸ್ವಾಮಿ
Team Udayavani, Mar 10, 2022, 9:30 PM IST
ಬೆಂಗಳೂರು: ಪಶ್ಚಿಮ ವಾಹಿನಿ ಯೋಜನೆಯಡಿ ಬೆಳ್ತಂಗಡಿ ವ್ಯಾಪ್ತಿಯಲ್ಲಿ 16 ವೆಂಟೆಡ್ ಡ್ಯಾಂ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 2018ರಿಂದ ಇಲ್ಲಿಯವರೆಗೆ ಪಶ್ಚಿಮ ವಾಹಿನಿ ಯೋಜನೆಯಡಿ 32 ವೆಂಟೆಡ್ ಡ್ಯಾಂ ಮಂಜೂರಾಗಿದ್ದು, ಇವುಗಳಲ್ಲಿ 16 ಕಾಮಗಾರಿ ಪೂರ್ಣಗೊಂಡಿದ್ದು, 6 ಕಾಮಗಾರಿಗಳು ಪ್ರಗತಿಯಲ್ಲಿದ್ದು, 2 ಕಾಮಗಾರಿಗಳನ್ನು ಪ್ರಾರಂಭಿಸಬೇಕಾಗಿರುತ್ತದೆ.
ಎಂಟು ಕಾಮಗಾರಿಗಳ ಗುತ್ತಿಗೆ ಒಪ್ಪಿಗೆ ಪತ್ರ ನೀಡಿದ್ದು, ಕರಾರು ಕೈಗೊಳ್ಳಬೇಕಾಗಿರುತ್ತದೆ. ಈ ಕಾಮಗಾರಿಗಳ ಒಟ್ಟು ಅಂದಾಜು 114 ಕೋಟಿ ರೂ. ಆಗಿದ್ದು, 62.08 ಕೋಟಿ ರೂ. ವೆಚ್ಚವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ